ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು- ಸಿದ್ದರಾಮಯ್ಯ
ಬೆಂಗಳೂರು, ಮೇ 18, ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರ ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ನಿರ್ಧರಿಸಿದಂತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತುಕತೆ ನಡೆಸಬೇಕು. ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ ಎಂದು ಹೇಳಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 