ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು- ಸಿದ್ದರಾಮಯ್ಯ
ಬೆಂಗಳೂರು, ಮೇ 18, ಕಾರ್ಮಿಕ ಕಾಯ್ದೆಗಳಿಗೆ ಅವಸರದಲ್ಲಿ ಮತ್ತು ಏಕಪಕ್ಷೀಯವಾಗಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರ ಕೊರೊನಾ ಹಾವಳಿಯಿಂದಾಗಿ ಕಷ್ಟದಲ್ಲಿರುವ ಕಾರ್ಮಿಕರ ಗಾಯದ ಮೇಲೆ ಬರೆ ಹಾಕಲು ನಿರ್ಧರಿಸಿದಂತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿನಿಂದಾಗಿ ನಷ್ಟದಲ್ಲಿರುವ ಉದ್ಯಮಗಳಿಗೆ ನೆರವಾಗುವುದೆಂದರೆ ಕಾರ್ಮಿಕರ ನ್ಯಾಯಬದ್ಧ ಹಕ್ಕುಗಳನ್ನು ಕಿತ್ತುಕೊಂಡು ಅವರನ್ನು ನಿರುದ್ಯೋಗಿಗಳನ್ನಾಗಿ ಮಾಡುವುದಲ್ಲ. ಮಾಲೀಕರದ್ದು ಮಾತ್ರವಲ್ಲ, ಕಾರ್ಮಿಕರ ಹಿತರಕ್ಷಣೆ ಕೂಡಾ ಚುನಾಯಿತ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೊದಲು ಕಾರ್ಮಿಕ ಪ್ರತಿನಿಧಿಗಳ ಜೊತೆಯೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತುಕತೆ ನಡೆಸಬೇಕು. ವಿಧಾನಮಂಡಲ ಅಧಿವೇಶನದಲ್ಲಿಯೂ ಚರ್ಚೆ ನಡೆಯಬೇಕು. ಈಗಿನ ಅವಸರದ ನಡೆಯ ಹಿಂದೆ ದುರುದ್ದೇಶದ ವಾಸನೆ ಹೊಡೆಯುತ್ತಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 