ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
ಬೆಂಗಳೂರು, ಜ 18 , ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಭವಿಷ್ಯದಲ್ಲಿ ಮಕ್ಕಳು ಹಾದಿ ತಪ್ಪುವುದಿಲ್ಲ ಎಂದು ಗೃಹ ಸಚಿವ ಅಮಿತ್ ಷಾ ಪ್ರತಿಪಾದಿಸಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ಸಂಸ್ಥೆ ಆಯೋಜಿಸಿದ್ದ ವಿವೇಕ ದೀಪಿನೀ ಮಹಾ ಸಮರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಲಕ್ಷಾಂತರ ಮಕ್ಕಳನ್ನುದ್ದೇಶಿಸಿ ಭಾಷಣ ಮಾಡಿದರು. ಸಂಸ್ಕಾರ, ಸಂಸ್ಕೃತಿ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಇವುಗಳು ಬದುಕಿಗೆ ಆಧಾರ ಸ್ಥಂಭವಾಗಿವೆ ಎಂದರು. ದೇಶದ ಹೆಗ್ಗುರುತುಗಳಾಗಿರುವ ವೇದ ಉಪನಿಷತ್ತುಗಳ ಸಾಂಸ್ಕೃತಿಕ ಜ್ಞಾನವನ್ನು ಮಕ್ಕಳಿಗೆ ಎಳೆಯ ವಯಸ್ಸಿನಿಂದಲೇ ಧಾರೆ ಎರೆಯುವುದು ಅತ್ಯಗತ್ಯವಾಗಿದ್ದು, ಮಕ್ಕಳಿಗೆ ಅವರ ಪಠ್ಯ ವಿಷಯಗಳೊಂದಿಗೆ ದೇಶದ ಸಂಸ್ಕೃತಿ, ಇತಿಹಾಸ, ಪುರಾಣಗಳ ಬಗ್ಗೆ ಆಸಕ್ತಿ ಮೂಡಿಸುವ ಬಗ್ಗೆ ಪೋಷಕರು ಆಸಕ್ತಿ ತೋರಬೇಕು ಎಂದರು. ಸಂಸ್ಕೃತಿ, ಇತಿಹಾಸಗಳ ಅಧ್ಯಯನ ಮಕ್ಕಳಲ್ಲಿ ಶಿಸ್ತು ಮೂಡಿಸಲು ಸಹಕಾರಿ. ತಮ್ಮ ಜೀವಿತಾವಧಿಯಲ್ಲಿ ಒಬ್ಬ ವ್ಯಕ್ತಿ ಎಷ್ಟೆಲ್ಲಾ ಸಾಧಿಸಬಹುದು ಎನ್ನುವುದಕ್ಕೆ ಆದಿ ಶಂಕರಾಚಾರ್ಯರ ಜೀವನ ಅತ್ಯುತ್ತಮ ಉದಾಹರಣೆಯಾಗಿದೆ, ಮಕ್ಕಳಿಗೆ ಅವರು ಸ್ಫೂರ್ತಿಯ ಸೆಲೆಯಾಗಿದೆ, ಭಾರತದಲ್ಲಿ ಆಗಿಹೋಗಿರುವ ಮಹಾಪುರುಷರ ಜೀವನ ಕತೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಅಗತ್ಯವಾಗಿದೆ ಎಂದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ೫೦೦ ಪ್ರೌಢಶಾಲೆಗಳ ೨ ಲಕ್ಷಕ್ಕೂ ಹೆಚ್ಚು ಮಕ್ಕಳು ವಿವೇಕದೀಪಿನೀ ಕಲಿಯುತ್ತಿದ್ದಾರೆ, ಇದರಿಂದ ಮಕ್ಕಳ ಮೇಲೆ ಸಕಾರಾತ್ಮಕ ಪರಿಣಾಮವಾಗುತ್ತಿದೆ ಎನ್ನುವ ವ್ಯಾಪಕ ಅಭಿಪ್ರಾಯದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಇದರ ಬೋಧನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ತಿಳಿಸಿದರು. ಶಿಕ್ಷಣದಲ್ಲಿ ನೈತಿಕ ಮೌಲ್ಯಗಳನ್ನು ಮೂಡಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ವೇದಾಂತ ಭಾರತಿ ಸಂಸ್ಥೆ "ವಿವೇಕದೀಪೀನಿ ರಾಷ್ಟ್ರೀಯ ಮಹಾ ಸಮಾವೇಶ " ಏರ್ಪಡಿಸಿತ್ತು. ಇಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ಶ್ಲೋಕ ಪಠಣ ಮಾಡಿದರು. ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠದ ಶ್ರೀ ಶಂಕರ ಭಾರತಿ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವೇದಾಂತ ಭಾರತಿ ಸಂಸ್ಥೆಯ ಅಧ್ಯಕ್ಷ ಹಾಗೂ ಮಹಾಸಮಾವೇಶದ ಮುಖ್ಯಸ್ಥ ಎಸ್.ಎಸ್. ನಾಗಾನಂದ, ವೇದಾಂತ ಭಾರತಿ ಸಂಸ್ಥೆಯ ಟ್ರಸ್ಟಿ ಸಿ.ಎಸ್. ಗೋಪಾಲ ಕೃಷ್ಣ, ಟ್ರಸ್ಟ್ ನ ನಿರ್ದೇಶಕ ಶ್ರೀಧರ್ ಭಟ್ ವೇದಿಕೆ ಮೇಲಿದ್ದರು. ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ ಗೃಹ ಸಚಿವರನ್ನು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಮತ್ತು ಸಚಿವರು ಆತ್ಮೀಯವಾಗಿ ಬರಮಾಡಿಕೊಂಡರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 