ಆನಂದ್ ಸಿಂಗ್ ಮಗನ ಮದುವೆ ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಬೇಕು: ರಾಯರೆಡ್ಡಿ ಆಗ್ರಹ
ಆನಂದ್ ಸಿಂಗ್ ಮಗನ ಮದುವೆ ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಬೇಕು: ರಾಯರೆಡ್ಡಿ ಆಗ್ರಹ
ಬಳ್ಳಾರಿ: ಅನರ್ಹಗೊಂಡಿರುವ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯಥರ್ಿ ಆನಂದ್ ಸಿಂಗ್ ವಾಮ ಮಾರ್ಗದಿಂದ ಚುನಾವಣೆ ಗೆಲ್ಲಲು ಮುಂದಾಗಿದ್ದಾರೆ ಎಂದು ಮಾಜಿ ಸಚಿವ, ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಬಸವರಾಜ ರಾಯರೆಡ್ಡಿ ಆರೋಪಿಸಿದರು.
ಹೊಸಪೇಟೆ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನಂದ್ ಸಿಂಗ್ ಡಿ.1 ರಂದು ಮಗನ ಮದುವೆಯನ್ನು ಅದ್ದೂರಿಯಾಗಿ ಮಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ. ಈ ಬಗ್ಗೆ ಕಾಂಗ್ರೆಸ್ ಚುನಾವಣೆ ಆಯೋಗಕ್ಕೆ ದೂರು ನೀಡಿದೆ.
ಮಗನ ಮದುವೆಯಲ್ಲಿ ಆನಂದ್ ಸಿಂಗ್ ಒಂದು ಊಟಕ್ಕೆ 500 ರೂ.ಯಂತೆ ಸುಮಾರು ಎರಡು ಕೋಟಿ ರೂ. ಖಚರ್ು ಮಾಡುತ್ತಿದ್ದಾರೆ. ಪೆಂಡಾಲ್ ಗೆ ಎರಡು ಕೋಟಿ ರೂ. ಖಚರ್ು ಮಾಡುತ್ತಿದ್ದಾರೆ. ಮದುವೆ ನೆಪದಲ್ಲಿ ಮತದಾರರಿಗೆ 51 ಸಾವಿರ ಗೋಲ್ಡ್ ಕಾಯಿನ್ ಹಂಚಲು ಮುಂದಾಗಿದ್ದಾರೆ. ಈ ಬಗ್ಗೆಯೂ ಕಾಂಗ್ರೆಸ್ ದೂರು ನೀಡಲಿದೆ. ಮದುವೆಯಲ್ಲಿ ಸಿಸಿ ಟಿವಿ ಅಳವಡಿಕೆ ಜತೆಗೆ ವಿಶೇಷ ಸ್ಕ್ವಾಡ್ ಕಳಿಸಬೇಕು. ಎಲ್ಲವನ್ನೂ ಲೆಕ್ಕ ಇಟ್ಟು ಆನಂದ್ ಸಿಂಗ್ ರ ಚುನಾವಣಾ ವೆಚ್ಚಕ್ಕೆ ಸೇರಿಸಬೇಕೆಂದು ಬಸವರಾಜ ರಾಯರೆಡ್ಡಿ ಆಗ್ರಹಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 