ಬಜೆಟ್ನಲ್ಲಿ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮತ್ತು ಹಣಕಾಸು ಮೀಸಲು ಬೇಡಿಕೆ
Announcement of a government medical college for Vijayapura in the budget and demand for financial r
ವಿಜಯಪುರ 14 : ಜಿಲ್ಲೆಯ ಜನತೆಯ ದೀರ್ಘಕಾಲದ ಬೇಡಿಕೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಡುತ್ತಿರುವ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯ ನಿಯೋಗವು ಇಂದು ಹಾವೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದೆ.ನಿಯೋಗದಲ್ಲಿ ಹೋರಾಟ ಸಮಿತಿಯ ಸದಸ್ಯರು ಮನವಿ ಪತ್ರದ ಮೂಲಕ ಸಮಿತಿಯು ಈ ಕೆಳಗಿನ ಮುಖ್ಯ ಬೇಡಿಕೆಗಳನ್ನು ಇಟ್ಟಿದೆ:- ಮುಂಬರುವ ರಾಜ್ಯ ಬಜೆಟ್ ಮಂಡನೆಯ ಸಂದರ್ಭದಲ್ಲಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಬರುವ ಬಜೆಟ್ ನಲ್ಲಿ ಅಧಿಕೃತ ಘೋಷಣೆ ಮಾಡಬೇಕು.- ಈ ಕಾಲೇಜಿನ ಸ್ಥಾಪನೆಗೆ ಅಗತ್ಯವಾದ ಹಣಕಾಸು ನಿಧಿಯನ್ನು ಬಜೆಟ್ನಲ್ಲಿ ಮೀಸಲಿಡಬೇಕು.
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವುದರಿಂದ ಸ್ಥಳೀಯ ಜನತೆಗೆ ಉನ್ನತ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ದೊರೆಯುತ್ತಿಲ್ಲ. ಈ ಹೋರಾಟವು ಜಿಲ್ಲೆಯ ಶಿಕ್ಷಣ ಮತ್ತು ಆರೋಗ್ಯ ಹಕ್ಕಿನ ಬಗ್ಗೆಯಾಗಿದ್ದು, ದೀರ್ಘಕಾಲದಿಂದ ನಡೆಯುತ್ತಿರುವ ಜನರ ಆಕಾಂಕ್ಷೆಯನ್ನು ಪ್ರತಿಬಿಂಬಿಸುತ್ತದೆ.ಮಾನ್ಯ ಮುಖ್ಯಮಂತ್ರಿಗಳು ಈ ಬೇಡಿಕೆಯನ್ನು ಪರಿಗಣಿಸಿ, ಬಜೆಟ್ನಲ್ಲಿ ಸಕಾರಾತ್ಮಕ ಘೋಷಣೆ ಮಾಡುವರೆಂದು ಹೋರಾಟ ಸಮಿತಿ ಭರವಸೆ ವ್ಯಕ್ತಪಡಿಸಿದೆ. ಇದರಿಂದ ಉತ್ತರ ಕರ್ನಾಟಕದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ಸಿಗಲಿದೆ.ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಭಗವಾನ್ ರೆಡ್ಡಿ, ಅರವಿಂದ್ ಕುಲಕರ್ಣಿ, ಲಲಿತಾ ಬಿಜ್ಜರಗಿ, ಅಕ್ರಮ ಮಾಶಾಲ್ಕರ್, ಮಲ್ಲಿಕಾರ್ಜುನ್ ಎಚ್.ಟಿ, ಸುರೇಶ್ ಜೇಬಿ, ಭೋಗೇಶ್ ಸೋಲಾಪುರ್, ಸಿದ್ದರಾಮ್ ಹಳ್ಳೂರ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 