ವಾರ್ಷಿಕ ಪತ್ರಕರ್ತ ಪ್ರಶಸ್ತಿ ಪ್ರದಾನ ಹಾಗೂ ಉಪನ್ಯಾಸ ಕಾರ್ಯಕ್ರಮ
Annual Journalist Award Presentation and Lecture Programme
ಲೋಕದರ್ಶನ ವರದಿ
ಧಾರವಾಡ 11 : ಕರ್ನಾಟಕ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಇದೇ ದಿನಾಂಕ: 12-7-2026 ರಂದುರವಿವಾರ ಸಂಜೆ 6 ಗಂಟೆಗೆ ಮನೋಜ ಪಾಟೀಲ ದತ್ತಿ ಕಾರ್ಯಕ್ರಮದ ಅಂಗವಾಗಿ ‘ವಾರ್ಷಿಕ ಪತ್ರಕರ್ತ ಪ್ರಶಸ್ತಿ’ ಪ್ರದಾನ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಧಾರವಾಡದ ಸಂಯುಕ್ತಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರಡಾ.ವಿಶ್ವನಾಥ ಕೋಟಿಯವರಿಗೆ ಮನೋಜ ಪಾಟೀಲ ದತ್ತಿ‘ವಾರ್ಷಿಕ ಪತ್ರಕರ್ತ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇವರಿಗೆ ಪ್ರಶಸ್ತಿ ಫಲಕ, ಶಾಲು, ಪುಷ್ಪಹಾರ ಜೊತೆಗೆ ಐದು ಸಹಸ್ರರೂಪಾಯಿ ನಗದು ನೀಡಲಾಗುವುದು. ಸುವರ್ಣ ನ್ಯೂಜ್ಟಿವಿಯ ಸಂಪಾದಕಅಜಿತ್ ಹನುಮಕ್ಕನವರ ಅವರು ಮುಖ್ಯಉಪನ್ಯಾಸಕರಾಗಿ ಆಗಮಿಸಲಿದ್ದು ‘ಇಂದಿನ ಪತ್ರಕರ್ತರು ಹಾಗೂ ಪತ್ರಿಕೋದ್ಯಮ’ದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಧಾರವಾಡಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಅಧ್ಯಕ್ಷ ಬಂಡು ಕುಲಕರ್ಣಿ ಹಾಗೂ ಸಂಯುಕ್ತಕರ್ನಾಟಕ ಪತ್ರಿಕೆಯಕಾರ್ಯನಿರ್ವಾಹಕ ಸಂಪಾದಕ ಮೋಹನ ಹೆಗಡೆ ಆಗಮಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಕ.ವಿ.ವ. ಸಂಘದ ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮನೋಜ ಪಾಟೀಲ ಅವರು ಉಪಸ್ಥಿತರಿರುವರು. ಕ.ವಿ.ವ.ಸಂಘದ ಆಶ್ರಯದಲ್ಲಿ ಪತ್ರಕರ್ತರಿಗೆ ಮೊದಲ ಬಾರಿ ‘ವಾರ್ಷಿಕ ಪತ್ರಕರ್ತ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 