ಕೇಂದ್ರದಿಂದ ಮುಂದಿನವಾರ ಮತ್ತೊಂದು ಕರೋನ ಪ್ಯಾಕೇಜ್ ?
ನವದೆಹಲಿ, ಮೇ 10, ಕೊರೊನಾ ಸಂಕಷ್ಟ ಮತ್ತು ಲಾಕ್ ಡೌನ್ ನಿಂದ ತೊಂದರೆಗೆ ಸಿಲುಕಿದ ದೇಶದ ಬಡವರ ಕಷ್ಟ ನಿವಾರಣೆಗಾಗಿ ಕೇಂದ್ರ ಶೀಘ್ರದಲ್ಲೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಈಗಾಗಲೇ ಕೇಂದ್ರ ಸರ್ಕಾರವು 1.7 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ಘೋಷಣೆ ಮಾಡಿತ್ತು . ಇದರ ಬೆನ್ನಲ್ಲೇ ಆರ್ಥಿಕತೆಯ ಸುಧಾರಣೆಗೆ ಸರ್ಕಾರ ಮುಂದಿನ ವಾರ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮತ್ತೊಂದು ಪ್ಯಾಕೇಜ್ ಘೋಷಣೆ ಸಂಬಂಧ ಕಳೆದ ಶನಿವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸಿದ್ದು, ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಪ್ರಧಾನಿ ಕಾರ್ಯಾಲಯ ಸಿದ್ಧತೆ ನಡೆಸುತ್ತಿದೆ ಎಂದೂ ಹೇಳಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 