ಕಾಶ್ಮೀರ ತಾಜಾ ಸೇಬಿನ ಹಣ್ಣುಗಳ ಮೇಲೂ ಭಾರತ ವಿರೋಧಿ ಘೋಷಣೆ....!
ಶ್ರೀನಗರ, ಅ 17: ಮಾರುಕಟ್ಟೆಗೆ ಕಾಶ್ಮೀರದ ತಾಜಾ ಸೇಬು ಹಣ್ಣುಗಳು ಬಂದಿವೆ. ವ್ಯಾಪಾರಿಗಳು ಸಂತಸದಿಂದಲೇ ಸೇಬು ಖರೀದಿಸಿದರು, ಹಣ್ಣಿನ ಪೆಟ್ಟಿಗೆ ತೆರೆದು ನೋಡಿ... ದಿಗ್ಬ್ರಮೆಗೊಳಗಾಗಿದ್ದಾರೆ...!
ಸೇಬಿನ ಹಣ್ಣುಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಕಪ್ಪು ಸ್ಕೆಚ್ ಪೆನ್ನಲ್ಲಿ ಬರೆದಿರುವುದೇ ಇದಕ್ಕೆ ಕಾರಣ. ಕಾಶ್ಮೀರದ ಕತುವಾ ಸಗಟು ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.
ಈ ಕೃತ್ಯವನ್ನು ವಿರೋಧಿಸಿ ವ್ಯಾಪಾರಿಗಳು ಕೂಡಲೇ ಮಾರುಕಟ್ಟೆಯ ಮುಂದೆ ಪ್ರತಿಭಟನೆ ನಡೆಸಿದರು. ಸೇಬು ಹಣ್ಣುಗಳ ಮೇಲೆ 'ಬುರ್ಹಾನ್ ವನಿ', 'ಪಾಕಿಸ್ತಾನ್ ಜಿಂದಾಬಾದ್' ಹಾಗೂ 'ಗೋ ಬ್ಯಾಂಕ್ ಇಂಡಿಯಾ' ಘೋಷಣೆಗಳನ್ನು ಬರೆದಿರುವ ಬಗ್ಗೆ ವ್ಯಾಪಾರಿಗಳು ತೀವ್ರ ಆಕ್ರೋಶಗೊಂಡಿದ್ದಾರೆ.
ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಿರುವ ಮಾರುಕಟ್ಟೆ ಅಧ್ಯಕ್ಷ ರೋಹಿತ್ ಗುಪ್ತಾ, ದುಷ್ಕೃತ್ಯ ನಡೆಸಿದವರನ್ನು ಕೂಡಲೇ ಗುರುತಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 