ಹಾಲುಮತ ಸಮಾಜಕ್ಕೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನ : ಜಾರಕಿಹೊಳಿ
Apex bank directorship for the Haalumata society: Jarakiholi
ಬೆಳಗಾವಿ 05: ಕೊಟ್ಟ ಮಾತಿನಂತೆ ಹಾಲು ಮತ ಸಮಾಜಕ್ಕೆ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ ಕುರುಬ ಸಮಾಜಕ್ಕೆ ಪ್ರಾಶಸ್ತ್ಯವನ್ನು ನೀಡೇ ನೀಡುತ್ತೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು.
ಬೆಳಗಾವಿ ಡಿಸಿಸಿ ಬ್ಯಾಂಕಿನ ಎಲ್ಲ 16 ಜನ ನಿರ್ದೇಶಕರು ಸೇರಿಕೊಂಡು ರಾಹುಲ್ ಜಾರಕಿಹೊಳಿ ಅವರನ್ನು ಅಪೆಕ್ಸ್ ಬ್ಯಾಂಕಿನ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬ್ಯಾಂಕಿನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕಿಗೆ ಕಳುಹಿಸಿಕೊಡುವ ನಿಯಮವು ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಜಾರಕಿಹೊಳಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಕಳಿಸಿದ್ದೇವೆ.
ನಂತರ ರಾಹುಲ್ ಜಾರಕಿಹೊಳಿ ಅವರು ಹೆಸರನ್ನು ಸೂಚಿಸುವ ಒಬ್ಬ ವ್ಯಕ್ತಿಯನ್ನು ಬೆಳಗಾವಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾಗುತ್ತಾರೆ. ಇದು ಕೂಡ ಸಹಕಾರ ಸಂಘದ ನಿಯಮವಾಗಿದೆ. ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 