ಗಣತಿ ಕಾರ್ಯಕ್ಕೆ ಮೊದಲು ದಿನವೇ ಕೈಕೊಟ್ಟ ಆ್ಯಪ್ ಸರ್ವರ್ ಸಮಸ್ಯೆ
App server issue that occurred the day before the census
ಹೂವಿನ ಹಡಗಲಿ 23: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಆರಂಭವಾದ ಮೊದಲ ದಿನವೇ ಸಮೀಕ್ಷೆ ಗೆ ರೂಪಿಸಿದ್ದ ಆ್ಯಪ್ ನ ತಾಂತ್ರಿಕ ದೋಷ ಮತ್ತು ಸರ್ವರ್ ಸಮಸ್ಯೆ ಎದುರಾಯಿತು. ಸಮೀಕ್ಷೆ 2025 ಗಣತಿ ಕಾರ್ಯ ತಹಸಿಲ್ದಾರ ಜಿ ಸಂತೋಷ್ ಕುಮಾರ್ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿದರು.
ಪಟ್ಟಣದ 23 ನೇ ಡಿವಿಜನ್ ಹಳ್ಳದ ರಸ್ತೆಯಲ್ಲಿ ಊಳಿಗದ ಹನುಮೇಶ ಇವರ ಕುಟುಂಬ ಗಣತಿ ಮಾಡುವುದರ ಮೂಲಕ ಚಾಲನೆಯನ್ನು ನೀಡಿದರು. ಸಮೀಕ್ಷೆಗೆ ನಿಖರವಾದ ಮಾಹಿತಿ ಕುಟುಂಬದವರು ನೀಡಿ ಸಹಕರಿಸಿರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಧಿಕಾರಿ ರಮೇಶ್ ,ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೊಟ್ರಗೌಡ ಅಯ್ಯನಗೌಡ್ರ, ಗಣತಿದಾರ ಗುರುಬಸವನಗೌಡ, ಶಿಕ್ಷಕ ಪಕೀರ ಸಾಬ್ ಇದ್ದರು. ಹೂವಿನ ಹಡಗಲಿ ತಾಲೂಕಿನಲ್ಲಿ ಒಟ್ಟು 407 ಗಣತಿ ಬ್ಲಾಕ್ ಗಳಿದ್ದು, 407 ಗಣತಿದಾರರು ಮತ್ತು 35 ಮೇಲ್ವಿಚಾರಕರು 9 ಜನ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸುತ್ತಿದ್ದಾರೆ.ಸೆಪ್ಟೆಂಬರ್ 22.9. 25 ರಿಂದ 07.09.25 ರವರೆಗೆ ಗಣತಿ ಕಾರ್ಯ ನಡೆಯುತ್ತದೆ ಎಂದು ತಹಶೀಲ್ದಾರ್ ಜಿ ಸಂತೋಷ್ ಕುಮಾರ್ ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 