ಪೈಪ್ಲೈನ್ ಅಳವಡಿಸುವಂತೆ ಸಚಿವ ಡಿ,ಕೆ. ಶಿವಕುಮಾರರಿಗೆ ಮನವಿ
Appeal to Minister D,K. Shivakumar to nstall the pipeline,
ಜಮಖಂಡಿ 17: ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಿಂದ ಗಲಗಲಿ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ವರೆಗೆ ಪೈಪ್ಲೈನ್ ಅಳವಡಿಸುವಂತೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಲ ಸಂಪನ್ಮೂಲ ಸಚಿವ ಡಿ,ಕೆ. ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಅಸ್ತಿತ್ವದಲ್ಲಿರುವ ಮಂಟೂರು ಏತ ನೀರಾವರಿ ಯೋಜನೆಯಿಂದ ಗಲಗಲಿ ಬ್ಯಾರೇಜ್ದವರೆಗೆ ಪೈಪ್ಲೈನ್ ಜೋಡಣೆ ಮಾಡುವುದರಿಂದ ಬೇಸಿಗೆಯ ದಿನದಲ್ಲಿ ರೈತರಿಗೆ, ಜನ-ಜಾನುವಾರುಗಳಿಗೆ ನೀರಿನ ತೊಂದರೆ ಕಡಿಮೆಯಾಗುತ್ತದೆ. ಇದರಿಂದ ಸುಮಾರು 50 ರಿಂದ 60 ಹೆಚ್ಚು ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ , ಅಂದಾಜು 440 ಲಕ್ಷ ವೆಚ್ಚದ ಕಾಮಗಾರಿಗೆ ಹಣ ಖರ್ಚಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು, ಆದ್ದರಿಂದ ಕಾಮಗಾರಿಕೆಗೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿದರು.
ಜಲಸಂಪನ್ಮೂಲ ಸಚಿವರು ಕಾಮಗಾರಿ ಪರೀಶೀಲಿಸಿ ವರದಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 