ವಿಜಯನಗರ ಜಿಲ್ಲೆ ಮಾಡುವಂತೆ ಯಡಿಯೂರಪ್ಪಗೆ ಮನವಿ
ಬೆಂಗಳೂರು, ಸೆ 18 ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉಜ್ಜಯಿನಿ ಜಗದ್ಗುರುಗಳು ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್, ವಿಜಯನಗರವನ್ನು ಜಿಲ್ಲೆ ಮಾಡಬೇಕು ಎನ್ನುವುದು ಅಲ್ಲಿನ ಜನಪ್ರತಿನಿಧಿಗಳ ಹಾಗೂ ಅಲ್ಲಿನ ಜನರ ಬೇಡಿಕೆಯಾಗಿದೆ. ಹಾಗಾಗಿ ಇಂದು ನಡೆಯುವ ಕ್ಯಾಬಿನೆಟ್ನಲ್ಲಿ ಈ ವಿಷಯವನ್ನು ಮಂಡಿಸಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದರು.
ಅಲ್ಲಂ ವಿರಭದ್ರಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯ ಒಂದು ವಿಶ್ವದಲ್ಲಿ ಹೆಸರು ವಾಸಿಯಾಗಿರುವ ನಗರವಾಗಿದೆ. ಯುನೆಸ್ಕೋ ಇದನ್ನು ಪರಿಗಣಿಸಿದೆ. ಹಾಗಾಗಿ ಇದನ್ನು ಜಿಲ್ಲೆಯನ್ನಾಗಿ ಮಾಡಿದರೆ ಆಡಳಿತಾತ್ಮಕವಾಗಿ ತುಂಬ ಅನುಕೂಲವಾಗುತ್ತದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಉಜ್ಜಯಿನಿ ಸದ್ಗುರುಗಳು ಮಾತನಾಡಿ, ವಿಜಯನಗರದ ಗತ ವೈಭವ ಮರು ಕಳಿಸಬೇಕಾದರೆ ಇದನ್ನು ಜಿಲ್ಲೆಯನ್ನಾಗಿ ಮಾಡಬೇಕು. ಇವತ್ತು ಮೈಸೂರು ದಸರೆಗೆ ಪ್ರೇರಣೆ ಸಿಕ್ಕಿರುವುದೇ ವಿಜಯನಗರ ಸಾಮ್ರಾಜ್ಯ. ಹಾಗಾಗಿ, ಈ ನೆಲಕ್ಕೆ ತನ್ನದೇ ಆದ ವಿಶೇಷ ಗುಣಗಳು ಇವೆ. ಹಾಗಾಗಿ ಇದನ್ನು ಜಿಲ್ಲೆಯ ನ್ನಾಗಿ ಮಾಡಬೇಕು ಅಂತ ಮನವಿ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 