ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
Appeal to locate heirs of deceased person
ಬಳ್ಳಾರಿ 07: ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡ್ರಾಳ್ ಗ್ರಾಮದ ಜಮೀನಿನೊಂದರ ಕೃಷಿ ಹೊಂಡದಲ್ಲಿ ಸಾಗರ್ ಎನ್ನುವ 25 ವರ್ಷದ ವ್ಯಕ್ತಿಯು ಸ್ನಾನ ಮಾಡಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು, ಈಜು ಬಾರದೇ ಏ.27 ರಂದು ಮೃತಪಟ್ಟಿದ್ದು, ಮೃತ ದೇಹವನ್ನು ಬಿಮ್ಸ್ ನ ಶೀಥಲೀಕೃತ ಶವಗಾರ ಕೋಣೆಯಲ್ಲಿರಿಸಲಾಗಿದೆ. ಮೃತನ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.4 ಅಡಿ, ದುಂಡು ಮುಖ, ಸಾಧಾರಣ ತೆಳ್ಳನೇಯ ಮೈಕಟ್ಟು, ಗೋಧಿ ಮೈ ಬಣ್ಣ ಹೊಂದಿದ್ದು, ಬಲ ಕಣ್ಣು ಮೆಳ್ಳಿಗಣ್ಣು ಇದ್ದು, ಬಲಗೈ ಭುಜದ ಬಳಿ ಒಂದು ಚಿಕ್ಕ ಕಪ್ಪು ಮಚ್ಚೆ ಇರುತ್ತದೆ. ಬಲಗೈ ಪಾದದ ಮೇಲೆ ಹಳೆ ಗಾಯದ ಗುರುತು ಇರುತ್ತದೆ.
ಬಲಗೈ ಮೇಲೆ ಹಳದಿ ಬಣ್ಣದ ಸಂಗೋಳ್ಳಿ ರಾಯಣ್ಣ ಹೆಸರು ಇರುವ ರಬ್ಬರ್ ಬ್ಯಾಂಡ್, ಸ್ಟೀಲ್ ಕಡುಗ ಧರಿಸಿರುತ್ತಾನೆ. ಸಿಮೆಂಟ್ ಬಣ್ಣದ ಪ್ಯಾಂಟ್ ಮತ್ತು ಕೆಂಪು ಬಣ್ಣದ ಒಳಉಡುಪು ಧರಿಸಿರುತ್ತಾನೆ. ವ್ಯಕ್ತಿಯು ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್ಐ ದೂ.08396-220333, ಮೊ.9480803053, ಸಿಪಿಐ ದೂ.08396-220003, ಮೊ.9480803032, ಬಳ್ಳಾರಿ ಗ್ರಾಮೀಣ ಉಪವಿಭಾಗ ಡಿಎಸ್ಪಿ ದೂ.08392-276000, ಮೊ.9480803021 ಅಥವಾ ಬಳ್ಳಾರಿ ಎಸ್ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 