ಮರಾಠಾ ಸಮಾಜದ ಬೇಡಿಕೆ ಈಡೇರಿಸಲು ಮನವಿ
ವಿಜಯಪುರ, 11 : ಮರಾಠಾ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ಬಜೆಟ್ನಲ್ಲಿ ಮರಾಠಾ ಸಮಾಜವನ್ನು ಕಡೆಗಣಿಸಿರುವುದನ್ನು ಖಂಡಿಸಿ ಮರಾಠಾ ಸಮಾಜದ ಮುಖಂಡರು ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ವೀರ ಶಿವಾಜಿ ಸೇನೆ ಜಿಲ್ಲಾಧ್ಯಕ್ಷರಾದ ಸಂಗಮೇಶ ಜಾಧವ ಇವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೀದರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮರಾಠಾ ಸಮಾಜದ ಬಹುದಿನಗಳ ಬೇಡಿಕೆಯನ್ನು ತಾವು ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಮರಾಠಾ ಸಮಾಜವನ್ನು 3ಬಿ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಾಗಿಯೂ ವಾಗ್ದಾನ ಮಾಡಿದ್ದರು. ಆದರೆ ಮುಖ್ಯಮಂತ್ರಿಗಳಾದ ಮೇಲೆ ತಾವು ನೀಡಿದ ಬರವಸೆಯನ್ನು ಈಡೇರಿಸಿಲ್ಲ. 2020-21 ರ ಬಜೆಟ್ನಲ್ಲಿ ಮರಾಠಾ ಸಮಾಜವನ್ನು ಕಡೆಗಣಿಸಲಾಗಿದೆ. ಇದರಿಂದ ಮರಾಠಾ ಸಮಾಜದವರಿಗೆ ತುಂಬಾ ನಿರಾಶೇಯುಂಟಾಗಿದೆ. ಬಿಜೆಪಿ ಸರಕಾರ ಈಗಾಲಾದರೂ ಎಚ್ಚೆತ್ತುಕೊಂಡು ಮರಾಠಾ ಸಮಾಜದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾತಯಿಸಿದರು.
ಮರಾಠಾ ಸಮಾಜದ ಮುಖಂಡರಾದ ಮಾರುತಿ ತಾ. ನಿಕ್ಕಂ, ಸದಾಶಿವ ಚವ್ಹಾಣ, ಗಜಾನನ ಪವಾರ, ಅಂಬಾದಾಸ ಸಿಂದಗಿ, ಸಂತೋಷ ಪವಾರ, ದೀಪಕ, ಜ್ಯೋತಿಬಾ ನಿಕ್ಕಂ, ಶಂಕರ ತೊರವತ, ತುಕಾರಾಮ ನಲವಡೆ, ಪರಶುರಾಮ ಮುಳವಾಡ, ಶಿವಾಜಿ ಮಾನೆ, ತುಳಸಿರಾಮ ಸೂರ್ಯವಂಶಿ, ಭಗವಂತ ಪವಾರ ಮುಂತಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 