ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಮನವಿ
Appeal to start government cow shelter
ಜಮಖಂಡಿ 05: ನಗರದಲ್ಲಿ ಸರ್ಕಾರದಿಂದ ಗೋಶಾಲೆಯನ್ನು ಪ್ರಾರಂಭಿಸುವಂತೆ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪೌರಾಯುಕ್ತ ಜ್ಯೋತಿ ಗೀರೀಶ, ಅವರಿಗೆ ಮನವಿ ಸಲ್ಲಿಸಿದರು.
ಓಲೆಮಠದ ಆನಂದ ದೇವರು ಮಾತನಾಡಿ, ನಗರದಲ್ಲಿ ತರಕಾರಿ ಮಾರಾಟ ಮಾಡಿ ಉಳಿದಿರುವ ತರಕಾರಿಯನ್ನು ರಸ್ತೆಯ ಮೇಲೆ ಎಸೆದು ಹೋಗುತ್ತಾರೆ. ಬಿದ್ದಿರುವ ತರಕಾರಿಗಳನ್ನು ತಿನ್ನಲು ದನ, ಕರಗಳು ಬರುತ್ತವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ನಮ್ಮ ಸುತ್ತಮುತ್ತಲಿನ ತಾಲೂಕಿನಲ್ಲಿ ಗೋಶಾಲೆ ಇಲ್ಲವಾದ್ದರಿಂದ ನಗರದಲ್ಲಿ ಗೋಶಾಲೆ ನಿರ್ಮಾಣ ಮಾಡಲೇಬೇಕು ಎಂದು ಮನವಿ ಮಾಡಿದರು.
ನಾಗರಿಕ ಹಿತರಕ್ಷಣ ಸಂಘ, ಲೈನ್ಸ್ ಸೇವಾ ಸಂಸ್ಥೆ, ಸಿವಿಲ್ ಇಂಜಿನಿಯರ್ ಅಸೋಸಿಯನ್, ಸ್ತ್ರೀ ಶಕ್ತಿ ಸಂಘ, ಶ್ರೀ ಬಸವೇಶ್ವರ ವ್ಯಾಪಾರಸ್ಥರ ಸಂಘ, ಶ್ವೇತಾಂಬರ ಜೈನ ಟ್ರಸ್ಟ್, ತಾಲೂಕ ಬ್ರಾಹ್ಮಣ ಸಂಘ, ಭಾರತೀಯ ಸ್ವರಾಜ್ಯ ಸಂಸ್ಥೆ, ರಾಮತೀರ್ಥ ರೋಟರಿ ಸಂಸ್ಥೆ, ಮಹೇಶ್ವರಿ ಮಹಿಳಾ ಮಂಡಲ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಬಸವ ಗ್ರಾಮೀಣ ಅಭಿವೃದ್ಧಿ ಸಂಘ ಕಡಪಟ್ಟಿ ಮುಂತಾದ ಸಂಘಟನೆಗಳ ಪದಾಧಿಕಾರಿಗಳಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 