ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಮನವಿ
Appeal to start government cow shelter
ಜಮಖಂಡಿ 05: ನಗರದಲ್ಲಿ ಸರ್ಕಾರದಿಂದ ಗೋಶಾಲೆಯನ್ನು ಪ್ರಾರಂಭಿಸುವಂತೆ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪೌರಾಯುಕ್ತ ಜ್ಯೋತಿ ಗೀರೀಶ, ಅವರಿಗೆ ಮನವಿ ಸಲ್ಲಿಸಿದರು.
ಓಲೆಮಠದ ಆನಂದ ದೇವರು ಮಾತನಾಡಿ, ನಗರದಲ್ಲಿ ತರಕಾರಿ ಮಾರಾಟ ಮಾಡಿ ಉಳಿದಿರುವ ತರಕಾರಿಯನ್ನು ರಸ್ತೆಯ ಮೇಲೆ ಎಸೆದು ಹೋಗುತ್ತಾರೆ. ಬಿದ್ದಿರುವ ತರಕಾರಿಗಳನ್ನು ತಿನ್ನಲು ದನ, ಕರಗಳು ಬರುತ್ತವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ನಮ್ಮ ಸುತ್ತಮುತ್ತಲಿನ ತಾಲೂಕಿನಲ್ಲಿ ಗೋಶಾಲೆ ಇಲ್ಲವಾದ್ದರಿಂದ ನಗರದಲ್ಲಿ ಗೋಶಾಲೆ ನಿರ್ಮಾಣ ಮಾಡಲೇಬೇಕು ಎಂದು ಮನವಿ ಮಾಡಿದರು.
ನಾಗರಿಕ ಹಿತರಕ್ಷಣ ಸಂಘ, ಲೈನ್ಸ್ ಸೇವಾ ಸಂಸ್ಥೆ, ಸಿವಿಲ್ ಇಂಜಿನಿಯರ್ ಅಸೋಸಿಯನ್, ಸ್ತ್ರೀ ಶಕ್ತಿ ಸಂಘ, ಶ್ರೀ ಬಸವೇಶ್ವರ ವ್ಯಾಪಾರಸ್ಥರ ಸಂಘ, ಶ್ವೇತಾಂಬರ ಜೈನ ಟ್ರಸ್ಟ್, ತಾಲೂಕ ಬ್ರಾಹ್ಮಣ ಸಂಘ, ಭಾರತೀಯ ಸ್ವರಾಜ್ಯ ಸಂಸ್ಥೆ, ರಾಮತೀರ್ಥ ರೋಟರಿ ಸಂಸ್ಥೆ, ಮಹೇಶ್ವರಿ ಮಹಿಳಾ ಮಂಡಲ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಬಸವ ಗ್ರಾಮೀಣ ಅಭಿವೃದ್ಧಿ ಸಂಘ ಕಡಪಟ್ಟಿ ಮುಂತಾದ ಸಂಘಟನೆಗಳ ಪದಾಧಿಕಾರಿಗಳಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 