ಬಿರುಗಾಳಿ ಮಳೆಗೆ ಬಗ್ಗಿದ ಗಿಡಗಳನ್ನು ಸಂರಕ್ಷಿಸಲು ಅರಣ್ಯ ಇಲಾಖೆಗೆ ಮನವಿ
Appeal to the Forest Department to protect trees damaged by storms
ಬಳ್ಳಾರಿ 26: ನಗರದ ಅನಂತಪುರ ರಸ್ತೆ ಬೈಪಾಸ್ನಿಂದ ವಿಆರ್ಎಲ್ ಗೋಡೌನ್ ಮೂಲಕ ಬೆಂಗಳೂರು ರಸ್ತೆಯವರೆಗೆ ಕಳೆದೊಂದು ವರ್ಷ ಹಿಂದೆ ಅರಣ್ಯ ಇಲಾಖೆ ವತಿಯಿಂದ ನೆಡಲಾಗಿದ್ದ ಹಲವು ಗಿಡಗಳು ಇತ್ತೀಚೆಗೆ ಸುರಿದ ಭಾರಿ ಬಿರುಗಾಳಿ ಮಳೆಯಿಂದ ಬಾಗಿರುವ ಘಟನೆ ಕಂಡುಬಂದಿದೆ. ಸುಮಾರು 20ರಿಂದ 30 ಗಿಡಗಳು ಬಗ್ಗಿ ಹಾನಿಗೊಳಗಾಗಿರುವುದರಿಂದ ಅವುಗಳನ್ನು ತಕ್ಷಣವೇ ನೆಟ್ಟಗೆ ನಿಲ್ಲಿಸಿ ಸಂರಕ್ಷಣೆ ಮಾಡುವಂತೆ ಸಮಾಜ ಸೇವಕ ಎಂ. ಶಂಕರ್ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಸ್ತೆ ಬದಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನೆಡಲಾಗಿದ್ದ ಗಿಡಗಳು ಪರಿಸರ ಸಂರಕ್ಷಣೆಗೆ ಬಹಳ ಉಪಯುಕ್ತವಾಗಿದ್ದು, ಅವು ಹಾನಿಗೊಳಗಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಗಿಡಗಳಿಗೆ ಅಗತ್ಯವಾದ ಬೆಂಬಲ ಕಂಬಗಳನ್ನು ಅಳವಡಿಸಿ ಪುನಃ ಸರಿಪಡಿಸಿದರೆ ಅವು ಬದುಕುಳಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳ ಪರೀಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 