ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಸದಸ್ಯೆರ ನೇಮಕ
Appointment of new members of Karnataka Pradesh Congress Committee
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಸದಸ್ಯೆರ ನೇಮಕ
ಹೊಸಪೇಟೆ 29: ನಗರದ ಐ.ಬಿ.ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೇಮಕಾತಿ ಆದೇಶ ಪತ್ರವನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ಅಧ್ಯಕ್ಷರಾದ ಡಾ. ಉದಿತ್ರಾಜ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ ಹಾಗೂ ಜಿಲ್ಲಾಧ್ಯಕ್ಷರಾದ ಪಿ.ವೆಂಕಟೇಶಲು ಅನಮೋದನೆ ಮೇರೆಗೆ ಸಣ್ಣಕ್ಕಿ ಜಂಗಪ್ಪ ವಿಜಯನಗರ ಜಿಲ್ಲೆಯ ಗೌರವಾಧ್ಯಕ್ಷರು, ಹೆಚ್.ಕಣಿಮೆಪ್ಪ ವಿಜಯನಗರ ಜಿಲ್ಲೆಯ ಉಪಾಧ್ಯಕ್ಷರಾಗಿ, ನಿಸಾರ್ ಅಹಮದ್.ಕೆ. ವಿಜಯನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ, ಅಬ್ದುಲ್ ಗಫೂರ್, ತಿಪ್ಪೇಸ್ವಾಮಿ ಮಠದ ವಿಜಯನಗರ ಜಿಲ್ಲೆಯ ಕಾರ್ಯದರ್ಶಿಗಳಾಗಿ” ಹುದ್ದೆಗೆ ನೇಮಿಸಲಾಯಿತು. ಈ ತಕ್ಷಣ ಜವಾಬ್ದಾರಿಯನ್ನು ವಹಿಸಿಕೊಂಡು, ಜಿಲ್ಲೆ, ತಾಲೂಕು, ಗ್ರಾಮ ವ್ಯಾಪ್ತಿಯಲ್ಲಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಈ ನೇಮಕಾತಿಯನ್ನು ಜಿಲ್ಲಾಧ್ಯಕ್ಷರಾದ ಪಿ.ವೆಂಕೇಶಲು ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಗುಜ್ಜಲ್ ಲಿಂಗಣ್ಣ ನಾಯಕ, ಜಿಲ್ಲಾಧ್ಯಕ್ಷರಾದ ಪಿ.ವೆಂಕಟೇಶಲು, ಸೋಮಣ್ಣ, ಉಲ್ಲೇಶ, ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಭಾಗಿಯಾಗಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 