ಕರವೇ ನೂತನ ಪದಾಧಿಕಾರಿಗಳ ನೇಮಕ
Appointment of new office-bearers for KaRaVe
ಕರವೇ ನೂತನ ಪದಾಧಿಕಾರಿಗಳ ನೇಮಕ
ದೇವರ ಹಿಪ್ಪರಗಿ 13: ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ನೂತನ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ರಹಿಮಾನಸಾಬ ಕನಕಾಲ್ ತಿಳಿಸಿದ್ದಾರೆ. ಅಬೂಬಕರ ಯಲಗಾರ ಅವರನ್ನು ತಾಲೂಕು ಉಪಾಧ್ಯಕ್ಷರಾಗಿ, ಅಮೀದ ಮುಲ್ಲಾ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಮಲ್ಲಿಕಾರ್ಜುನ ಬಿರಾದರ ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ಇಮಾಮ್ ಮುಲ್ಲಾ ಅವರನ್ನು ತಾಲೂಕು ಕ್ರೀಡಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಸಂಘಟನೆಯ ಬಲವರ್ಧನೆ, ಕನ್ನಡ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ರಹಿಮಾನಸಾಬ ಕನಕಾಲ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 