ಅಪ್ಪುಗೋಳ ವಂಚನೆ : ಶೀಘ್ರ ಬೆಳಗಾವಿಗೆ ಸಿಐಡಿ ತಂಡ
ಬೆಳಗಾವಿ : ನಗರದ ಆನಂದ ಅಪ್ಪುಗೋಳ ಆಧಿನದ ಸಂಗೊಳಿ ರಾಯಣ್ಣ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದು, ಈ ಕುರಿತು ಅಧಿಕಾರಿಗಳ ತಂಡವು ಶೀಘ್ರವಾಗಿ ಬೆಳಗಾವಿಗೆ ಆಗಮಿಸಲಿದೆ ಎಂದು ಹೇಳಲಾಗಿದೆ.
ಸಿಐಡಿ ಡಿವೈಎಸ್ಪಿ ಪುರಷೋತ್ತಮ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭೀಮಾಂಬಿಕ ಸಹಕಾರ ಸಂಘಗಳ 50ಕ್ಕೂ ಅಧಿಕ ಸೊಸೈಟಿಗಳಲ್ಲಿ ಸಾವಿರಾರು ಜನ ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಹಣ ಇಟ್ಟಿದ್ದರು. ಠೇವಣಿ ಅವಧಿ ಮುಗಿದರೂ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿಮರ್ಾಪಕ ಆನಂದ ಅಪ್ಪುಗೋಳ ಹಣ ಮರಳಿಸದೇ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಗ್ರಾಹಕರು ಪ್ರತಿಭಟನೆ ನಡೆಸುತ್ತಲೇ ಇದ್ದು, ಕೆಲ ತಿಂಗಳ ಹಿಂದೆಯಷ್ಟೇ ಮಹಾನಗರ ಪೊಲೀಸರು ಈ ನೂರಾರು ಕೋಟಿ ವಂಚನೆಯ ತನಿಖೆಯನ್ನು ಸಿಒಡಿಗೆ ಹಸ್ತಾಂತರಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ಡಿವೈಎಸ್ಪಿ ಪುರಷೋತ್ತಮ ನೇತೃತ್ವದ ತಂಡ ಮುಂದಿನ ವಾರ ಬೆಳಗಾವಿಗೆ ಬರಲಿದೆ. ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ ಹಾಗೂ ಸೊಸೈಟಿ ನಿದರ್ೆಶಕರನ್ನು ಈ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ರಾಜ್ಯ ಸಕರ್ಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದು, ತಮ್ಮ ಠೇವಣಿ ಹಣ ಕೈ ಸೇರುವ ನಿರೀಕ್ಷೆಯಲ್ಲಿ ಗ್ರಾಹಕರಿದ್ದಾರೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 