ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಆರು ಮಂದಿ ಪಾರು
ಗ್ಯಾಂಗ್ಟಕ್, ಮೇ 7,ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಉತ್ತರ ಸಿಕ್ಕಿಂನಲ್ಲಿ ನಡೆದಿದೆ.ಅದರಲ್ಲಿದ್ದ ಒಟ್ಟು 6 ಜನರಿದ್ದರು. ಅದರಲ್ಲಿ ನಾಲ್ವರು ಹೆಲಿಕಾಪ್ಟರ್ಗೆ ಸಂಬಂಧಪಟ್ಟವರು ಮತ್ತು ಇಬ್ಬರು ಸೈನಿಕರಾಗಿದ್ದಾರೆ. ಅವರು ನಿಯಮಿತ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ರಕ್ಷಣೆಗಾಗಿ ಬೇರೆ ಹೆಲಿಕಾಪ್ಟರ್ಗಳನ್ನು ಅಲ್ಲಿಗೆ ಕಳುಹಿಸಲಾಯಿತು.ಚಾಪೆನ್ ಮತ್ತು ಮುಕುಥಾಂಗ್ ಎಂಬ ಪ್ರದೇಶದ ನಡುವೆ ಹೆಲಿಕಾಪ್ಟರ್ ತುರ್ತಾಗಿ ಇಳಿದಿದೆ. ಆದರೆ ನಿಖರವಾದ ಸ್ಥಳ ಯಾವುದು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 