ಎಐಎಡಿಎಂಕೆ ಮಾಜಿ ಸಂಸದ ಪಳನಿಸ್ವಾಮಿ ಬಂಧನ
ಚೆನ್ನೈ, ಜನವರಿ 25, ಎಐಎಡಿಎಂಕೆ ವೆಬ್ಸೈಟ್ ಬಳಸುತ್ತಿದ್ದ ಆರೋಪದ ಮೇಲೆ ಮಾಜಿ ಸಂಸದ ಕೆಸಿ ಪಳನಿಸ್ವಾಮಿ ಅವರನ್ನು ಶನಿವಾರ ಬಂಧಿಸಲಾಗಿದೆ.ಅವರು ಪೊಲೀಸ್ ವ್ಯಾನ್ ಹತ್ತುತ್ತಿದ್ದಾಗ, ಅವರನ್ನು ಬಂಧಿಸಲಾಗಿದೆ ಅವರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಲಾಗಿದೆ ಎಂಬ ಆರೋಪದ ಮೇರೆಗೆ ಪೊಲೀಸರು ಆತನ ವಿರುದ್ಧ ಐಪಿಸಿಯಲ್ಲಿ ಮತ್ತು 485, ಐಸಿಟಿ ಕಾಯ್ದೆಯಡಿ ಅನೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮುತ್ತುಕಂದನ್ ಪುಡೂರ್ ಪಂಚಾಯತ್ ಅಧ್ಯಕ್ಷ ಕಂದವೇಲ್ ನೀಡಿದ ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ.ಪಳನಿಸ್ವಾಮಿ ಪಕ್ಷ ವೆಬ್ ಸೈಟ್, ಚಿನ್ನೆ ಎರಡನ್ನೂ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷ ಕಂದವೇಲ್ ಆರೋಪ ಮಾಡಿದ್ದಾರೆ. ಪಕ್ಷದ ಸಂಸ್ಥಾಪಕ ಎಂಜಿಆರ್ ಕಾಲದಿಂದಲೂ ಎಐಎಡಿಎಂಕೆ ಸದಸ್ಯರಾಗಿದ್ದ ಪಳನಿಸ್ವಾಮಿ, ಅವರು ಪನ್ನೀರ್ಸೆಲ್ವಂ ಬಣದೊಂದಿಗೆ ಗುರುತಿಸಿಕೊಂಡಿದ್ದರು.ಪಕ್ಷದ ನಾಯಕಿ ಜಯಲಿತಾ ನಿಧನದ ನಂತರ ವಿ ಕೆ ಶಶಿಕಲಾ ವಿರುದ್ಧ ಬಂಡೆದಿದ್ದ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡದಿದ್ದರೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಬಂಡಾಯ ಸಾರಿ, ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಬೇಕು, ಎಂದು ಆಗ್ರಹಪಡಿಸಿ ನಾಯಕರ ಕೆಂಗಣ್ಣಿಗೂ ಅವರು ಗುರಿಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 