ಕಾರುಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ
ಬೆಂಗಳೂರು, ಜ 30 ಕುಡಿದ ಮತ್ತಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 45 ವರ್ಷದ ರಾಜೇಂದ್ರ ಬಂಧಿತ ಆರೋಪಿ. ಬುಧವಾರ ಮಧ್ಯರಾತ್ರಿ ಕುಡಿದ ಮತ್ತಿನಲ್ಲಿದ್ದ ಆತ ರಾಜಾಜಿನಗರದ ಮಂಜುನಾಥ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ ಐದು ಕಾರುಗಳಿಗೆ ಬೆಂಕಿ ಹಚ್ಚಿದ್ದನು.ಬೆಂಕಿ ಕಾಣಿಸಿಕೊಂಡು ಪರಿಣಾಮ ಸ್ಥಳೀಯರು ಕೂಡಲೇ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೂ, ಬೆಂಕಿಯ ತೀವ್ರತೆಗೆ ಐದು ಕಾರು ಆಹುತಿಯಾಗಿವೆ. ಇದೇ ಸಂದರ್ಭದಲ್ಲಿ ಕಾರು ಮಾಲೀಕನೋರ್ವ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಆರೋಪಿಯ ಮುಖ ಚಹರೆ ಸೆರೆಯಾಗಿತ್ತು. ಬೆಂಕಿ ಇಟ್ಟಿದ ಆರೋಪಿ ಸ್ವಲ್ಪ ಸಮಯದ ಬಳಿಕ ಮತ್ತದೇ ಸ್ಥಳಕ್ಕೆ ಬಂದು ಏನಾಗಿದೆ ಎಂದು ಪ್ರಶ್ನಿಸಿದ್ದಾನೆ.ಇದರಿಂದ ಆಕ್ರೋಶಗೊಂಡ ಸ್ಥಳೀಯರು ಆತನಿಗೆ ಗೂಸಾ ನೀಡಿದ್ದಾರೆ. ಸದ್ಯ ಬಸವೇಶ್ವರ ನಗರ ಪೊಲೀಸರು ಆರೋಪಿಯನ್ನು ವಶಕ್ಕೆಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 