ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಪಂದ್ಯಾವಳಿಗೆ ಆರ್ಯನ್ ಸೂರ್ಯವಂಶಿ ಆಯ್ಕೆ
Aryan Suryavanshi selected for national basketball tournament
ಬೆಳಗಾವಿ (ನಿಪ್ಪಾಣಿ) 20: ಇಲ್ಲಿನ ಕೆಎಲ್ಇ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ಸಂದೇಶ್ಕುಮಾರ್ ಸೂರ್ಯವಂಶಿ 16 ವರ್ಷದೊಳಗಿನವರ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಬಳ್ಳಾರಿಯ ವಾಡ್ಲಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಈ ಆಯ್ಕೆಯನ್ನು ಮಾಡಲಾಗಿತ್ತು. ಈ ಸ್ಪರ್ಧೆಗಳಲ್ಲಿ ಶಾಲಾ ವಿದ್ಯಾರ್ಥಿಗಳಾದ ಆರ್ಯನ್ ಸೂರ್ಯವಂಶಿ, ಪಾರ್ಥ್ ಹಿಂದೋಲ್, ಆದಿತ್ಯ ಟೋನ್, ಉಮ್ರಾಜ್ ನಾಗರ್ಜಿ ಭಾಗವಹಿಸಿದ್ದರು.
ಅವರಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆರ್ಯನ್ ಸೂರ್ಯವಂಶಿ ರಾಷ್ಟ್ರೀಯ ಬ್ಯಾಸ್ಕೆಟ್ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಆರ್ಯನ್ ಸ್ಥಳೀಯ ಛಾಯಾಗ್ರಾಹಕ ಸಂದೇಶ್ ಸೂರ್ಯವಂಶಿ ಅವರ ಮಗ. ಆರ್ಯನ್ ಅವರ ಆಯ್ಕೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.
ಆರ್ಯನ್ ಅವರಿಗೆ ಶಾಲಾ ತರಬೇತುದಾರ ನಾರಾಯಣ ಪಾಟೀಲ, ದೈಹಿಕ ಶಿಕ್ಷಕರಾದ ಬಸವರಾಜ ಕುಂಬಾರ, ಮಂಜುಳಾ ಬಾಣಿ, ಪ್ರಾಚಾರ್ಯರಾದ ಕಾಂಚನ್ ದಮ್ಮಳ, ಕೆಎಲ್ಇ ಸಂಸ್ಥೆಯ ನಿರ್ದೇಶಕ ಪ್ರವೀಣ ಬಾಗೇವಾಡಿ, ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮಾರ್ಗದರ್ಶನ ನೀಡಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 