ಶುಲ್ಕ ಹೆಚ್ಚಳ, ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿ
ಬೆಂಗಳೂರು, ಮೇ 21,ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ಹೆಚ್ಚಳ ಮಾಡಬಾರದು ಎಂಬ ಆದೇಶವನ್ನು ಧಿಕ್ಕರಿಸಿರುವುದು ಆಶಿಸ್ತಿನ ಪರಮಾವಧಿಯಾಗಿದೆ ಎಂದು ಸರ್ಕಾರ ಎಚ್ಚರಿಕೆ ನೋಟಿಸ್ ಜಾರಿ ಮಾಡಿದೆ. ಕರೋನ ಮತ್ತು ಲಾಕ್ಡೌನ್ ಕಾರಣ ರಾಜ್ಯದ ಜನತೆ ಬಹಳ ಸಂಕಷ್ಟದಲ್ಲಿ ಇರುವ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡಿ ಜನರ ಶೋಷಣೆಗೆ ಯಾವ ಖಾಸಗಿ ಶಾಲೆ ಮುಂದಾಗಬಾರದು ಸರ್ಕಾರ ಬಹಳ ಹಿಂದೆಯೇ ಸುತ್ತೊಲೆ ಹೊರಡಿಸಿದ್ದರೂ ಅದನ್ನು ಖಾಸಗಿ ಶಾಲೆಗಳು ಮಾನ್ಯ ಮಾಡದೆ ಪೋಷಕರ ಸುಲಿಗೆ ಮಾಡ ಹೊರಟಿರುವುದನ್ನು ಸಹಿಸಲಾಗದು ಎಚ್ಚರಿಕೆ ನೀಡಲಾಗಿದೆ. ಈ ಪತ್ರ ತಲುಪಿದ ಮೂರು ದಿನಗಳ ಒಳಗೆ ಲಿಖಿತ ಹೇಳಿಕೆ ಮೂಲಕ ಸೂಕ್ತ ಸಮಾಜಾಯಿಸಿ ಕೊಡಬೇಕು ತಪ್ಪಿದಲ್ಲಿ ಶಾಲೆಗಳ ವಿರುದ್ದ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರಣ ಕೇಳಿ ಖಾಸಗಿ ಶಾಲೆಗಳಿಗೆ ನೋಟಿಸ್ ಜಾರಿಮಾಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 