ಡಾಂಬರ್ ಪೇವರ್ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು
Asphalt paver tractor overturns: Driver dies
ಲೋಕದರ್ಶನ ವರದಿ,
ಜಮಖಂಡಿ 13: ನಗರದ ಹೊರವಲಯದ ಮುಧೋಳ ರಸ್ತೆಯ ಕಟ್ಟೆಕೆರೆಯ ಬಳಿ ಡಾಂಬರ್ ಪೇವರ್ ಟ್ರ್ಯಾಕ್ಟರ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಧಾರುಣ ಘಟನೆ ಸಂಭವಿಸಿದೆ.
ನಗರದ ಕಟ್ಟೆಕೆರೆಯ ಹತ್ತಿರ ಡಾಂಬರ್ ಪೇವರ್ ಟ್ರ್ಯಾಕ್ಟರ್ ವಾಹನ ಜಮಖಂಡಿ ಕಡೆಯಿಂದ ಮುಧೋಳ ಕಡೆಗೆ ಹೋಗುವ ಸಮಯದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹಳ್ಳಕ್ಕೆ ಊರುಳಿದ ಕಾರಣ ವಾಹನ ಚಾಲಕ ಪಲ್ಟಿಯಾದ ವಾಹನದ ಕೆಳಭಾಗದಲ್ಲಿ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪಿದ್ದಾನೆ.
ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಶಿರನಾಳ ಗ್ರಾಮದ ಬಂದೇನವಾಜ ಲಾಲಸಾಹೇಬ ಶೇಖ (28) ಎಂದು ಗುರುತಿಸಲಾಗಿದ್ದು. ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದ ರಾಜೇಸಾಹೇಬ ಜಾತಗಾರ ಅವರಿಗೆ ಸೇರಿದ ವಾಹನದ ಮೇಲೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಭೇಟಿ ನೀಡಿ. ವಾಹನದಲ್ಲಿ ಕೆಳಭಾಗದಲ್ಲಿ ಸಿಲುಕಿಕೊಂಡು ಸಾವನ್ನಪ್ಪಿದ ಚಾಲಕನನ್ನು ಹೊರತೆಗೆಯಲು ಹರಸಾಹಸಪಟ್ಟರು.
ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಶಹರ ಪೋಲಿಸ್ ಠಾಣೆಯ ಪಿಎಸ್ಐ ಅನೀಲ ಕುಂಬಾರ, ಗ್ರಾಮೀಣ ಪಿಎಸ್ಐ ಗಂಗಾಧರ ಪೂಜಾರಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 