ಕೊಡಗು ಪರಿಹಾರ ನಿದಿಗೆ ಸಂಡೂರು ತಾಪಂ, ತೋರಣಗಲ್ಲು ಗ್ರಾಪಂ ವತಿಯಿಂದ ನೆರವು
ಲೋಕದರ್ಶನ ವರದಿ
ಬಳ್ಳಾರಿ01: ಕೊಡಗು ಪರಿಹಾರ ನಿಧಿಗೆ ಜಿಲ್ಲೆಯ ಎಲ್ಲಾ ಗ್ರಾಪಂಗಳು, ತಾಪಂ ಅಧಿಕಾರಿ ಸಿಬ್ಬಂದಿಯವರು ತಮ್ಮ ಒಂದು ದಿನದ ಸಂಬಳವನ್ನು ನೀಡಿದ್ದು, ಅದರಂತೆ ಶುಕ್ರವಾರರಂದು ಸಂಡೂರು ತಾಪಂ ಅಧಿಕಾರಿ ಮತ್ತು ಸಿಬ್ಬಂದಿಯವರ ಒಂದು ದಿನದ ವೇತನವಾದ 34 ಸಾವಿರ ರೂ.ಗಳ ಡಿ.ಡಿ ಯನ್ನು ಸಂಡೂರು ತಾಪಂ ಕಾರ್ಯನಿವರ್ಾಹಕ ಅಧಿಕಾರಿಯಾದ ಅನ್ನದಾನಯ್ಯ ಸ್ವಾಮಿ ಅವರು ಜಿಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ನೀಡಿದರು. ಅದರಂತೆ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಪಂಯ ಸ್ವಂತ ಸಂಪನ್ಮೂಲದಿಂದ 1 ಲಕ್ಷ ರೂ.ಗಳ ಡಿಡಿಯನ್ನು ಸಹ ತೋರಣಗಲ್ಲು ಗ್ರಾಪಂ ಅಭಿವೃದ್ಧಿ ಅಧಿಕಾರಿ ಹನುಮತಪ್ಪ ಉಪ್ಪಾರ ಅವರು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು ಕೊಡಗು ನಿರಾಶ್ರಿತರ ಪರಿಹಾರ ನಿಧಿಗೆ ಬಳ್ಳಾರಿ ಜಿಪಂ ಮತ್ತು ಅದರ ಅಧೀನದ ಅನುಷ್ಠಾನ ಇಲಾಖೆಗಳು, ತಾಪಂಗಳ ಅಧಿಕಾರಿ ಸಿಬ್ಬಂದಿಯವರು ತಮ್ಮ ಒಂದು ದಿನದ ಸಂಬಳವನ್ನು ನೀಡಿ ಮಾನವೀಯತೆಯನ್ನು ಮೆರೆಯುತ್ತಿದ್ದಾರೆ. ಇವರು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಅದರಲ್ಲದೇ ಸಂಕಷ್ಟದಲ್ಲಿರುವ ಕೊಡಗಿನ ಜನತೆಯ ಬವಣೆಗೆ ಸ್ಪಂದಿಸುವ ಮೂಲಕ ಜಿಪಂ ಮತ್ತು ಅಧೀನದ ಅಧಿಕಾರಿ ಸಿಬ್ಬಂದಿವರು ಮಾದರಿಯಾಗುತ್ತಿದ್ದಾರೆ ಎಂದು ಶ್ಲಾಘೀಸಿದರು. ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದಶರ್ಿ ಮುಕ್ಕಣ್ಣ, ಸಂಡೂರು ತಾಪಂ ರೋಷನ್ ಜಮೀರ್, ಅಧೀಕ್ಷಕರಾದ ನರಸಿಂಹ ಮೂತರ್ಿ, ಬಸವರಾಜ ಇತರರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 