ಕೇರಳಕ್ಕೆ ನೆರವು ಪ್ರಕಟಿಸಿಲ್ಲ: ಯುಎಇ
ಅಬುಧಾಬಿ 24: ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸಗರ್ಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ "ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆಥರ್ಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
"ಕೇರಳಕ್ಕೆ ಯಾವುದೇ ನಿದರ್ಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ "ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು "ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ' ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 