ವಿವಿಧೆಡೆ ದಾಳಿ: ಓರ್ವ ಬಾಲಕಾರ್ಮಿಕನ ರಕ್ಷಣೆ
Attacked in various places: Rescue of a child laborer
ಬಳ್ಳಾರಿ 13: ಸಂಡೂರು ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ಮುಖ್ಯ ರಸ್ತೆಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ ಓರ್ವ ಬಾಲಕಾರ್ಮಿಕನನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಉಪತಹಶೀಲ್ದಾರ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಕಾರ್ತಿಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 