ಮಂಗಳೂರಿನ ದೇರಳಕಟ್ಟೆಯಲ್ಲಿ ಅಟೋಮಬೈಲ್ ಅಂಗಡಿ ಬೆಂಕಿಗೆ ಆಹುತಿ: ದುಷ್ಕರ್ಮಿಗಳ ಕೈವಾಡ ಶಂಕೆ
ಮಂಗಳೂರು, ಜ 17 : ನಗರದ ದೇರಳಕಟ್ಟೆಯಲ್ಲಿನ ಅಟೋಮಬೈಲ್ ಅಂಗಡಿಯೊಂದು ಶುಕ್ರವಾರ ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಮಾಲೀಕನಿಗೆ ಭಾರೀ ನಷ್ಟವಾಗಿದೆ.
ಶನಿವಾರ ಬೆಳಿಗ್ಗೆ ಅಂಗಡಿ ಮಾಲೀಕ ಬಾಗಿಲು ತೆರೆದಾಗ ಘಟನೆ ನಡೆದಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುಷ್ಕರ್ಮಿಗಳು ಅಂಗಡಿಗೆ ಬೆಂಕಿ ಇಟ್ಟಿರಬಹುದೆಂದು ಸ್ಥಳೀಯರು ಶಂಕಿಸಿದ್ದು, ಶುಕ್ರವಾರ ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಆರಂಭಿಸಲಾಗಿದೆ.
ಇತ್ತೀಚೆಗೆ ಇದೇ ಪ್ರದೇಶದಲ್ಲಿ ಸಿಎಎ ವಿರುದ್ಧದ ಪ್ರತಿಭಟನಾ ಸಮಾವೇಶಕ್ಕಾಗಿ ಕುರ್ಚಿಗಳನ್ನು ತುಂಬಿದ್ದ ಲಾರಿಯೊಂದಕ್ಕೆ ರಾತ್ರಿ ವೇಳೆ ಬೆಂಕಿ ಹಚ್ಚಲಾಗಿತ್ತು. ಇದರಿಂದ ಕುರ್ಚಿಗಳ ಸಮೇತ ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಿಂದ ಮೊದಲೇ ಗಲಭೆಗಳಿಂದ ಭಯ-ಭೀತರಾಗಿದ್ದ ನಗರದ ಜನರು ಮತ್ತೆ ಆತಂಕಕ್ಕೆ ಒಳಗಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 