ಕು.ಅವನಿ ಮಹೀಂದ್ರಕರ್ ಪ್ರಾದೇಶಿಕ ವಿಜೇತೆ
Avani Mahindrakar is the regional winner
ಧಾರವಾ 27: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಕು. ಅವನಿ ಮಹೀಂದ್ರಕರ್ 2024 ರ ನವೆಂಬರ್ ಇನ್ಟ್ಯಾಕ್ ನಡೆಸಿದ ಪೋಸ್ಟರ್ ತಯಾರಿಕೆ ಸ್ಪರ್ಧೆಯಲ್ಲಿ ಪ್ರಾದೇಶಿಕ ವಿಜೇತರಾಗಿ ಆಯ್ಕೆಯಾಗಿದ್ದಾರೆ.
ಇದು ದೆಹಲಿಯ ಇನ್ಟ್ಯಾಕ್ ಆಶ್ರಯದಲ್ಲಿ ನಡೆದ ಅಖಿಲ ಭಾರತ ಪೋಸ್ಟರ್ ತಯಾರಿಕೆ ಸ್ಪರ್ಧೆಯಾಗಿದ್ದು, ವಿದ್ಯಾರ್ಥಿಗಳು ನಮ್ಮ ಪ್ರದೇಶದ ಯಾವುದೇ ಅಮೂರ್ತ ಸಂಸ್ಕೃತಿ ಪರಂಪರೆಯನ್ನು ಬರೆಯುವ ಘೋಷಣೆಯೊಂದಿಗೆ ಚಿತ್ರಿಸಬೇಕೆಂದು ನೀರೀಕ್ಷಿಸಲಾಗಿತ್ತು. ಕುಮಾರಿ. ಅವನಿ ಮಹೀಂದ್ರಕರ್ ನಮ್ಮ ಜೆ.ಎಸ್.ಎಸ್ ಕ್ಯಾಂಪಸ್ನ ಭಾಗವಾಗಿರುವ ಶ್ರೀ ಮೈಲಾರ ಲಿಂಗ ಸ್ವಾಮಿಯ ಕಥೆಯನ್ನು ಚಿತ್ರಿಸುವ ಮೂಲಕ ಸ್ಪರ್ಧೆಯನ್ನು ಗೆದ್ದಿದ್ದಾರೆ.
ಇನ್ಟ್ಯಾಕ್ ಧಾರವಾಡ ಸಂಚಾಲಕ ಕರ್ನಲ್ ಮೋಹನ್ ಮಠ ಮತ್ತು ಇನ್ಟ್ಯಾಕ್ ಧಾರವಾಡದ ಇತರ ಸದಸ್ಯರು ಅವನಿ ಮತ್ತು ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಇತರ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯೆ ರೇಣು ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 