ಕೊರೋನಾ ಬಗ್ಗೆ ಪೊಲೀಸರಿಂದ ಜಾಗೃತಿ
ಹಾವೇರಿ,
ಏ.19,ಜಾಗತಿಕವಾಗಿ ಬಾಧಿಸುತ್ತಿರುವ ಕೋವಿಡ್-19 ಸೋಂಕಿನ ವಿರುದ್ಧ
ಹೋರಾಡುತ್ತಿರುವ ಪೊಲೀಸರು ಕೊರೊನಾ ವಾರಿಯರ್ಸ್ ನಂತೆ ಹಗಲಿರುಳು ದುಡಿಯುತ್ತಿದ್ದಾರೆ.
ಇಂತಹ ಕೊರೊನಾ ವಾರಿಯರ್ಸ್ ಪೊಲೀಸರಿಂದು ಹಿರೇಕೆರೂರು, ಹಂಸಬಾವಿ ಸೇರಿದಂತೆ ವಿವಿಧೆಡೆ
ವಾಹನದ ಮೂಲಕ ರಾಲಿ ನಡೆಸಿ ಕೊರೊನಾ ಕುರಿತು ಜಾಗೃತಿ ಮೂಡಿಸಿದರು. ಪೊಲೀಸರ ಈ
ಸೇವೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್
ವಂದನೆ ಸಲ್ಲಿಸಿ ಪೊಲೀಸರ ಕರ್ತವ್ಯ ಸೇವೆಯನ್ನು ಶ್ಲಾಘಿಸಿದರು.ಜಾಗೃತಿ ಜಾಥಾದಲ್ಲಿ
ಡಿವೈಎಸ್ಪಿ ಟಿ.ಸುರೇಶ್, ಎಸ್ಪಿ ಕೆ.ಜೆ.ದೇವರಾಜ್ ಎಎಸ್ಪಿ ಮಲ್ಲಿಕಾರ್ಜುನ್
ಸೇರಿದಂತೆ ಪಿಎಸ್ಐ ಸಿಪಿಐ , ಇತರೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.ಈ
ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಕೃಷಿ ಸಚಿವರಿಗೆ ಸಾಥ್
ನೀಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 