ಬೀದಿನಾಟಕ ಮೂಲಕ ಸರ್ಕಾರದ ಯೋಜನೆಗಳ ಜಾಗೃತಿ
Awareness of government schemes through street plays
ಲೋಕದರ್ಶನ ವರದೀಬೀದಿನಾಟಕ ಮೂಲಕ ಸರ್ಕಾರದ ಯೋಜನೆಗಳ ಜಾಗೃತಿ
ಬಳ್ಳಾರಿ 03:
ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸೋಮವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಕುರಿತು ಬೀದಿನಾಟಕ ಹಾಗೂ ಜಾನಪದ ಸಂಗೀತ ಕಲಾತಂಡಗಳಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಗ್ರಾಮದ ಹಿರಿಯರಾದ ತಿಮ್ಮಪ್ಪ ಅವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಇಬ್ರಾಹಿಂಪುರ ಚಿಗುರು ಕಲಾತಂಡ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ಬೀದಿ ನಾಟಕದ ಮೂಲಕ ಹಾಡುಗಳು ಪ್ರಸ್ತುತಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಈರಣ್ಣ, ತಿಪ್ಪಯ್ಯ, ಭಾಷಾ ಸಾಬ್, ದುರ್ಗಪ್ಪ, ಸಿದ್ದಪ್ಪ, ನಾಗಪ್ಪ, ಕಲಾವಿದರಾದ ಹುಲುಗಪ್ಪ ಎಸ್.ಎಂ., ಹೆಚ್.ರಮೇಶ್, ಹೆಚ್.ಎರ್ರಿಸ್ವಾಮಿ, ನವೀನ್, ವೆಂಕಟೇಶ್, ಗಂಗಮ್ಮ, ರುತಮ್ಮ, ರಾಜು ಸೇರಿದಂತೆ ಸಾರ್ವಜನಿಕರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 