ವಿಶ್ವ ನ್ಯುಮೋನಿಯಾ ದಿನ ಕುರಿತು ಜಾಗೃತಿ ಕಾರ್ಯಕ್ರಮ
ಬೆಳಗಾವಿ 12: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಬುಧವಾರ 12ನೆ ನವೆಂಬರ್ 2025 ರಂದು ವಿಶ್ವ ನ್ಯುಮೋನಿಯಾ ದಿನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯೆ ಡಾ. ಜ್ಯೋತಿ ಹಟ್ಟಿಹೋಳಿ ಅವರು ಭಾಗವಹಿಸಿ ವಿಶ್ವ ನ್ಯುಮೋನಿಯಾ ದಿನದ ಇತಿಹಾಸ, ಈ ವರ್ಷದ ಘೋಷವಾಕ್ಯ ಮತ್ತು ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ನ್ಯುಮೋನಿಯಾ ಶ್ವಾಸಕೋಶಗಳಿಗೆ ತಗಲುವ ಒಂದು ಸೊಂಕು, ಬಾಯಿ ಅಥವಾ ಮೂಗಿನ ಮೂಲಕ ನಡೆಸುವ ಉಚ್ಛಾಸದ ಮೂಲಕ ಶ್ವಾಸಕೋಶಗಳ ಒಳಕ್ಕೆ ಸೇರುವ ಸೂಕ್ಷ್ಮ ಜೀವಿಗಳಿಂದಾಗಿ ಈ ಸೊಂಕು ಉಂಟಾಗುವುದಕ್ಕೆ ನ್ಯುಮೋನಿಯಾ ಎಂದು ಕರೆಯುತ್ತಾರೆ. ನ್ಯುಮೋನಿಯಾ ಒಬ್ಬರಿಂದ ಒಬ್ಬರಿಗೆ ಹರಡುವ ಈ ರೋಗ ಸೊಂಕು ಪೀಡಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಹರಡುವ ಸಾಧ್ಯತೆ ಇರುತ್ತದೆ, ಈ ಸೊಂಕಿನಿಂದ ವ್ಯಕ್ತಿಯಲ್ಲಿ ಶ್ವಾಸಕೋಶ ಕ್ರಮೇಣವಾಗಿ ಹಾನಿಯಾಗತೊಡಗುತ್ತದೆ ಎಂದು ತಿಳಿಸಿದರು. ನ್ಯುಮೋನಿಯಾಕ್ಕೆ ಮುಂಜಾಗೃತ ಕ್ರಮಗಳು ಮತ್ತು ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ತಿಳಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 