ಡಿಜಿಟಲ್ ಹಿಂಸಾಚಾರ ಕುರಿತು ಜಾಗೃತಿ ಕಾರ್ಯಕ್ರಮ
Awareness program on digital violence
ಬಳ್ಳಾರಿ 30: ನಗರದಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ (ಈಕಂಋ) ಬಳ್ಳಾರಿ ಶಾಖೆಯು ಸರ್ಕಾರದ ಪಿಯು ಕಾಲೇಜು (ಹುಡುಗಿಯರ), ನಗರದಲ್ಲಿ ಡಿಜಿಟಲ್ ಹಿಂಸಾಚಾರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿಶ್ರೀಮತಿ ಎಸ್. ವಿಜಯಲಕ್ಷ್ಮಿ, ಶಾಖಾ ವ್ಯವಸ್ಥಾಪಕರು, ಈಕಂಋ ಯವರುಡಿಜಿಟಲ್ ಹಿಂಸಾಚಾರದ ವಿವಿಧ ರೂಪಗಳು, ಸೈಬರ್ ಅಪರಾಧಗಳ ಪ್ರಕಾರಗಳು, ಫೇಕ್ ಪ್ರೊಫೈಲ್ಗಳು, ಸೈಬರ್ ಬುಲಿಯಿಂಗ್, ಪಾಸ್ವರ್ಡ್ ಸುರಕ್ಷತೆ, ವೈಯಕ್ತಿಕ ಮಾಹಿತಿಯ ರಕ್ಷಣೆ ಮತ್ತು ಸೈಬರ್ ಅಪರಾಧಗಳನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ವಿವರವಾದ ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹಾಗೂ ಪ್ರಶ್ನೋತ್ತರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅನುಮಾನಗಳಿಗೆ ಸ್ಪಷ್ಟನೆ ಪಡೆದರು.ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಶ್ರೀಮತಿ ಸುಲೇಖಾ ಪ್ರಾಂಶುಪಾಲರು ಕಾರ್ಯಕ್ರಮವನ್ನು ಕುರಿತು ಮಾತನಾಡಿ,“ಇಂದಿನ ಡಿಜಿಟಲ್ ಯುಗದಲ್ಲಿ ಯುವತಿಯರು ತಂತ್ರಜ್ಞಾನವನ್ನು ಸುರಕ್ಷಿತವಾಗಿ ಬಳಸುವುದು ಅತ್ಯಂತ ಅಗತ್ಯ. ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಿಗೆ ಸರಿಯಾದ ಅರಿವು ನೀಡುತ್ತವೆ” ಎಂದು ಹೇಳಿದರು.ಈಕಂಋ ಈ ಶಾಖೆಯು ಯುವತಿಯರ ಸುರಕ್ಷತೆ, ಜಾಗೃತಿ ಮತ್ತು ಡಿಜಿಟಲ್ ಸಾಮರ್ಥ್ಯ ವೃದ್ಧಿಗೆ ಬದ್ಧವಾಗಿದೆ ಎಂದು ಸಂಘಟಕರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 