ಡಿಜಿಟಲ್ ಹಿಂಸಾಚಾರ ಕುರಿತು ಜಾಗೃತಿ ಕಾರ್ಯಕ್ರಮ
Awareness program on digital violence
ಬಳ್ಳಾರಿ 30: ನಗರದಲ್ಲಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ (ಈಕಂಋ) ಬಳ್ಳಾರಿ ಶಾಖೆಯು ಸರ್ಕಾರದ ಪಿಯು ಕಾಲೇಜು (ಹುಡುಗಿಯರ), ನಗರದಲ್ಲಿ ಡಿಜಿಟಲ್ ಹಿಂಸಾಚಾರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿಶ್ರೀಮತಿ ಎಸ್. ವಿಜಯಲಕ್ಷ್ಮಿ, ಶಾಖಾ ವ್ಯವಸ್ಥಾಪಕರು, ಈಕಂಋ ಯವರುಡಿಜಿಟಲ್ ಹಿಂಸಾಚಾರದ ವಿವಿಧ ರೂಪಗಳು, ಸೈಬರ್ ಅಪರಾಧಗಳ ಪ್ರಕಾರಗಳು, ಫೇಕ್ ಪ್ರೊಫೈಲ್ಗಳು, ಸೈಬರ್ ಬುಲಿಯಿಂಗ್, ಪಾಸ್ವರ್ಡ್ ಸುರಕ್ಷತೆ, ವೈಯಕ್ತಿಕ ಮಾಹಿತಿಯ ರಕ್ಷಣೆ ಮತ್ತು ಸೈಬರ್ ಅಪರಾಧಗಳನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ವಿವರವಾದ ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹಾಗೂ ಪ್ರಶ್ನೋತ್ತರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅನುಮಾನಗಳಿಗೆ ಸ್ಪಷ್ಟನೆ ಪಡೆದರು.ಈ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಶ್ರೀಮತಿ ಸುಲೇಖಾ ಪ್ರಾಂಶುಪಾಲರು ಕಾರ್ಯಕ್ರಮವನ್ನು ಕುರಿತು ಮಾತನಾಡಿ,“ಇಂದಿನ ಡಿಜಿಟಲ್ ಯುಗದಲ್ಲಿ ಯುವತಿಯರು ತಂತ್ರಜ್ಞಾನವನ್ನು ಸುರಕ್ಷಿತವಾಗಿ ಬಳಸುವುದು ಅತ್ಯಂತ ಅಗತ್ಯ. ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಿಗೆ ಸರಿಯಾದ ಅರಿವು ನೀಡುತ್ತವೆ” ಎಂದು ಹೇಳಿದರು.ಈಕಂಋ ಈ ಶಾಖೆಯು ಯುವತಿಯರ ಸುರಕ್ಷತೆ, ಜಾಗೃತಿ ಮತ್ತು ಡಿಜಿಟಲ್ ಸಾಮರ್ಥ್ಯ ವೃದ್ಧಿಗೆ ಬದ್ಧವಾಗಿದೆ ಎಂದು ಸಂಘಟಕರು ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 