ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ
Awareness program to prevent elder abuse
ವಿಜಯಪುರ : ನಗರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದಿಂದ ಹಿರಿಯರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಕೆ. ಉದ್ಘಾಟಿಸಿ, ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಹಿರಿಯರ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಬಗ್ಗೆ ಮಾತನಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ ಬೆಂಟೂರ ಹಿರಿಯರಿಗೆ ಅಗತ್ಯ ವೈದ್ಯಕೀಯ ಹಾಗೂ ಸಮಾಲೋಚನಾ ಸೇವೆಗಳನ್ನು ಒದಗಿಸುವ ಭರವಸೆ ನೀಡಿದರು.
ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಆನಂದ ಪಿ. ಅಂಬಲಿ, ದೌರ್ಜನ್ಯದಿಂದ ಉಂಟಾಗುವ ಮಾನಸಿಕ ಸಮಸ್ಯೆಗಳು ಹಾಗೂ ವಿಭಾಗದಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ಮಾರ್ಗದರ್ಶನ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಪೋಸ್ಟರ್ ಸ್ಪರ್ಧೆಯ ವಿಜೇತರಾದ ಎಂ.ಕೆ. ಹಿರ್ಯಾಳ, ಅನುಪಮಾ ಸಿನ್ಹಾ, ಅಂಜಲಿ ವರ್ಮಾ ಹಾಗೂ ದಾನಮ್ಮ ಅರಳಿ ಅವರನ್ನು ಸನ್ಮಾನಿಸಲಾಯಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 