ಬಕ್ರೀದ್ ಹಬ್ಬದ ಪ್ರಯುಕ್ತ ಜಾಗೃತಿ ಜಾಥಾ
Awareness rally on the occasion of Bakrid festival
ಜಮಖಂಡಿ 06: ನಗರದ ಗ್ರಾಮೀಣ ಪೋಲಿಸ್ ಠಾಣೆಗೆ ಜಿಲ್ಲಾ ಡಿ,ಆರ್ ಚಿತಾ ಪೋಲಿಸ್ ತಂಡ ಆಗಮಿಸಿ. ಗ್ರಾಮೀಣ ಪ್ರದೇಶದಲ್ಲಿ ಚಿತಾ ಬೈಕ್ಗಳ ಮೂಲಕ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಬಕ್ರೀದ್ ಹಬ್ಬದ ಕುರಿತು ಮುಂಜಾಗ್ರತವಾಗಿ ಜಾಗೃತಿಯನ್ನು ಮೂಡಿಸಿದರು.
ತಾಲೂಕಿನ ಹಿಪ್ಪರಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಗ್ರಾಮೀಣ ಠಾಣೆಯ ಪೋಲಿಸರು ಮತ್ತು ಚಿತಾ ಬೈಕ್ಗಳ ಪೋಲಿಸರು ಪ್ರಮುಖ ರಸ್ತೆಯ ಮೂಲಕ ಸಂಚರಿಸಿದರು.
ಬಕ್ರೀದ್ ಹಬ್ಬದ ಕುರಿತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ. ಹಿಂದು, ಮುಸ್ಲಿಂ ಎಂಬ ಭೇಧ, ಭಾವಗಳನ್ನು ಮರೆತು. ಎಲ್ಲ ಸಮಾಜದ ಭಾಂದವರು ಒಂದಾಗಿ ಸಹಬಾಳ್ವೆಯಿಂದ ಜೀವನ ಸಾಗಿಸುವದು ಹಾಗೂ ಯಾವುದೇ ಕೋಮು, ಗಲಭೆಗಳು ನಡೆಯದಂತೆ ಮುಂಜಾಗ್ರತವಾಗಿ ಜನತೆಯಲ್ಲಿ ಚಿತಾ ಬೈಕ್ಗಳ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ, ಗಂಗಾಧರ ಪೂಜಾರಿ, ಎಎಸ್ಐಗಳಾ ಕೆ,ಪಿ, ಸವದತ್ತಿ, ಎ,ಆಯ್, ಮಾಚಕನೂರ ಹಾಗೂ ಪೋಲಿಸ್ ಸಿಬ್ಬಂದಿಗಳು ಚಿತಾ ಬೈಕ್ಗಳ ಜಾಥಾದಲ್ಲಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 