ಅಯೋಧ್ಯೆ ತೀಪು : ಯುಪಿಯಲ್ಲಿ ಇಂದು ಮತ್ತು ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ
ಲಕ್ನೋ, ನ 9 : ಸುಪ್ರೀಂಕೋರ್ಟ್ ನಿಂದ ಅಯೋಧ್ಯೆ ತೀಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಇದರ ಪ್ರಕಾರ ನಾಲ್ಕು ಅಥವಾ ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಒಂದು ಕಡೆ ಸೇರುವಂತಿಲ್ಲ. ಇನ್ನು ಸೂಕ್ಷ್ಮ ಜಿಲ್ಲೆಗಳಲ್ಲಿ ಪೊಲೀಸ್ ಸಿಬ್ಬಂದಿ ಫ್ಲಾಗ್ ಮಾರ್ಚಿಂಗ್ ನಡೆಸುತ್ತಿದ್ದಾರೆ. ತೀರ್ಪುನ ಹಿನ್ನೆಲೆಯಲ್ಲಿ ಶನಿವಾರ ಮತ್ತು ಸೋಮವಾರ ಎಲ್ಲಾ ಶಾಲಾ ಕಾಲೇಜುಗಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ. ನೇಪಾಳದ ಗಡಿಯಲ್ಲೂ ಸಹ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪನೆ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಶಾಂತಿ, ಸುವ್ಯವಸ್ಥೆ ಧಕ್ಕೆಗೆ ಕಾರಣರಾಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇನ್ನು ಅಯೋಧ್ಯೆಯಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು, ಎಲ್ಲ ಕಡೆ ಪೊಲೀಸರ ಬೂಟು ಮತ್ತು ಲಾಟಿ ಸಪ್ಪಳ ಕೇಳಿ ಬರುತ್ತಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 