ಅಯೋಧ್ಯೆ ವಿವಾದ: ಸಿಜೆಐ ರಂಜನ್ ಗೊಗೊಯ್ ವಿದೇಶ ಪ್ರವಾಸ ರದ್ದು
ನವದೆಹಲಿ, ಅ 17: ಅಯೋಧ್ಯೆ ವಿವಾದ ಕುರಿತ ಅಂತಿಮ ತೀಪು ಪ್ರಕಟಿಸಿದ ನಂತರ ಎದುರಾಗುವ ಸಂಕಷ್ಟ, ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಲು ಸುಪ್ರೀಂಕೋರ್ಟ್ನ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ತಿಂಗಳು ಕೈಗೊಳ್ಳಬೇಕಾಗಿದ್ದ ತಮ್ಮ ವಿದೇಶ ಪ್ರವಾಸ ರದ್ದುಪಡಿಸಿದ್ದಾರೆ. ಅವರು, ಈ ತಿಂಗಳ 18 ರಂದು ದುಬೈಗೆ ತೆರಳಿ ಅಲ್ಲಿಂದ ಕೈರೋ, ಬ್ರೆಜಿಲ್ ಮತ್ತು ನ್ಯೂಯಾರ್ಕ್ನ್ಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ ಭಾಗವಹಿಸಿ, ಇದೇ 31ರಂದು ಸ್ವದೇಶಕ್ಕೆ ಹಿಂದಿರುಗುವ ಕಾರ್ಯಕ್ರಮ ನಿಗದಿಯಾಗಿತ್ತು. ಅಯೋಧ್ಯೆ ಪ್ರಕರಣ ಇತ್ಯರ್ಥಪಡಿಸುವ ಪ್ರಕ್ರಿಯೆಯ ಭಾಗವಾಗಿ ಅವರು ತಮ್ಮ ವಿದೇಶ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯ- ರಾಮಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂಕೋರ್ಟ್ನ್ ಸಂವಿಧಾನ ಪೀಠದ ನೇತೃತ್ವವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಹಿಸಿದ್ದಾರೆ. 40 ದಿನಗಳ ಕಾಲ ನಿತ್ಯ ನಡೆದ ವಿಚಾರಣೆಯ ನಂತರ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನವಂಬರ್ 17 ರಂದು ಗೊಗೊಯ್ ಅವರು ಸೇವಾ ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ15ರ ನಡುವೆ ತೀಪು ಪ್ರಕಟಿಸುವ ನಿರೀಕ್ಷೆಯಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 