ಕೊರೋನಾ ನಿಯಂತ್ರಣಕ್ಕೆ ಆಯುಷ್, ಆರೋಗ್ಯ ಸಚಿವಾಲಯ ಸಾಥ್ : ಶ್ರೀಪಾದನಾಯಕ್
ನವದೆಹಲಿ, ಮಾ 20, ದೇಶದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ಸಚಿವಾಲಯವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಹಕರಿಸುತ್ತಿದೆ ಎಂದು ಲೋಕಸಭೆಗೆ ಸರ್ಕಾರ ಶುಕ್ರವಾರ ತಿಳಿಸಿದೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ, ನಲಮಡ ಉತ್ತಮ್ ಕುಮಾರ್ ರೆಡ್ಡಿ, ಮಾರಕ ಕೊರೋನಾ ವೈರಸ್ ಸೋಂಕು ನಿವಾರಣೆಗೆ ಯಾವುದೇ ಚುಚ್ಚುಮದ್ದು ಅಥವಾ ಔಷಧಿ ಸದ್ಯ ಲಭ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ ಎಂದರು.ತೃಣಮೂಲ ಕಾಂಗ್ರೆಸ್ ಸದಸ್ಯ ಶತಾಬ್ದಿ ರೈ ಮಾತನಾಡಿ, ಹಲವು ಸಚಿವರು ಹಾಗೂ ಸಂಸದರು ಕೊರೋನಾ ನಿವಾರಣೆಗೆ ಗೋಮೂತ್ರ ಮದ್ದು ಎನ್ನುತ್ತಿದ್ದಾರಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಶ್ರೀಪಾದ್ ಯಸ್ಸೋ ನಾಯಕ್, ಕೊರೋನಾ ವೈರಾಣು ನಿಯಂತ್ರಣಕ್ಕೆಂದೇ ಯಾವುದೇ ನಿಗದಿತಚುಚ್ಚುಮದ್ದು ಅಥವಾ ಔಷಧ ಸದ್ಯಕ್ಕೆ ಲಭ್ಯವಿಲ್ಲ. ಆದಾಗ್ಯೂ, ಆಯುರ್ವೇದ, ಯುನಾನಿ, ಹೋಮಿಯೋಪಥಿ ಮೊದಲಾದ ಹಳೆಯ ಔಷಧ ಪದ್ಧತಿಯಿಂದ ಉಸಿರಾಟದ ವ್ಯವಸ್ಥೆ ಉತ್ತಮಗೊಳ್ಳುತ್ತಿರುವುದಂತೂ ಸತ್ಯ. ಕೊರೋನಾ ನಿಯಂತ್ರಿಸಲು ಆಯುಷ್ ಸಚಿವಾಲಯವೂ ಸಾಥ್ ಸಹಕರಿಸುತ್ತಿದೆ ಎಂದು ಹೇಳಿದರು. ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಮಾತನಾಡಿ, ದೇಶದಲ್ಲಿ ಕೊರೋನಾ ವೈರಸ್ ದೃಢೀಕರಣ ಪರೀಕ್ಷೆ ವೈಜ್ಞಾನಿಯಕ ರೀತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 