ಒಂದೇ ದಿನ ಮೂರು ಕೋಟಿ ಆದಾಯಗಳಿಸಿದ ಅಯ್ಯಪ್ಪ..!!
ಶಬರಿಮಲೆ, ನ 19 ಒಂದೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಆದಾಯ ಮೂರು ಕೋಟಿರೂಪಾಯಿಗೆ ಏರಿಕೆಯಾಗಿದೆ. ಕಳೆದ ಶನಿವಾರ ಮಂಡಲ ಪೂಜೆಗಾಗಿ ದೇಗುಲದ ಬಾಗಿಲು ತೆರೆಯಲಾಗಿದ್ದು ಅದೇ ದಿನ ಹೆಚ್ಚಿನ ಭಕ್ತರು ಶಬರಿಮಲೆಗೆ ಆಗಮಿಸಿ ಸ್ವಾಮಿಯ ದರ್ಶನ ಪಡೆದಿದ್ದಾರೆ.ದೇವಾಲಯಕ್ಕೆ ಬರೋಬರಿ 3.30 ಕೋಟಿ ಹಣವನ್ನು ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದಾರೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದೆ. ಕಳೆದ ಬಾರಿ 2.04 ಕೋಟಿ ರೂ ಹಣ ಸಂಗ್ರಹವಾಗಿತ್ತು ಜೊತೆಗೆ ಕಳೆದ ವರ್ಷ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶ ನಿಷೇಧಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿದ್ದರು. ಇದೆ 16ರ ಸಂಜೆ 5.30ಕ್ಕೆ ಮಂಡಲ-ಮಕ್ಕವರ್ಿಲಕ್ಕು ಪೂಜೆಗಾಗಿ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಾಗಿದ್ದು ಈವರೆಗೆ 70 ಸಾವಿರಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಅವರ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇವಾಲಯದ ಆದಾಯ ಶೇ.50ರಷ್ಟು ಹೆಚ್ಚಾಗಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 