ರಾಷ್ಟ್ರಿಯ ಮಹಿಳಾ ಕಾರ್ಯದರ್ಶಿಯಾಗಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ನೇಮಕ
B. Padmavati Subhash Acharya appointed as National Women's Secretary
ಬಳ್ಳಾರಿ 17: ಆಲ್ ಇಂಡಿಯಾ ವಿರಾಟ್ ವಿಶ್ವಕರ್ಮ ವುಮೆನ್ ಅಂಡ್ ಯೂಥ್ ಫೆಡರೇಷನ್ ನ ರಾಷಿೊಥಯ ಮಹಿಳಾ ಕಾರ್ಯದರ್ಶಿಯಾಗಿ ಬಳ್ಳಾರಿಯ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ಅವರು ನೇಮಕಗೊಂಡಿದ್ದಾರೆ. ಈ ಕುರಿತು ಫೆಡರೇಷನ್ ರಾಷ್ಟ್ರೀಯ ಅಧ್ಯಕ್ಷೆ ಡಾ.ಸುಮನ ಅವರು ನೇಮಕಾತಿ ಆದೇಶ ನೀಡಿದ್ದು, ಮೂರು ವರ್ಷದ ಅವಧಿಯಲ್ಲಿ ಫೆಡರೇಷನ್ ಆಶಯದಂತೆ ಸಮುದಾಯದ ಸಂಘಟನೆ, ಶಿಕ್ಷಣ, ಆರೋಗ್ಯ, ಓದ್ಯೋಗಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಕಾರ್ಯದರ್ಶಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ಅವರು ತಮ್ಮ ಈ ನೇಮಕಾತಿಗಾಗಿ ಹರ್ಷ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಎಐವಿಎಫ್ ಧಾರ್ಮಿಕ ಪರಿಷತ್ ನ ಅಧ್ಯಕ್ಷರಾದ ವೇದ ಬ್ರಹ್ಮರ್ಷಿ ಸ್ಥಪತಿ, ಜೋತಿಷ್ಯ ಶಾಸ್ತ್ರಜ್ಞರು, ಅಂತರಾಷ್ಟ್ರೀಯ ಧಾರ್ಮಿಕ ಪರಿಷತ್ ಅಧ್ಯಕ್ಷರು, ಸನಾತನ ಧರ್ಮ ಪ್ರಚಾರಕರು,
ಕಾಲಜ್ಞಾನಿ ಪೋತುಲೋರಿ ವೀರಬ್ರಹ್ಮೇಂದ್ರ ಸ್ವಾಮಿಯ ಪ್ರಚಾರಕರೂ ಟಿ.ಮೋಹನ್ ರಾವ್ ಶರ್ಮಾ, ದೆಹಲಿಯ ಅಲ್ ಇಂಡಿಯಾ ವುಮೆನ್ ಅಂಡ್ ಯ್ಯೂತ್ ಫೆಡರೇಷನ್ ಫೌಂಡರ್ಸ್ ರಾಜೇಶ್ವರಿ, ವೇದ ಬ್ರಹ್ಮರ್ಷಿ ಜೈನ ಕುಮಾರ್ ವಿಶ್ವ ಕರ್ಮ, ಸಂಸ್ಥೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ಮತಿ ಸುಮನ್ ಶ್ರೀನಿವಾಸನ್, ಚಿನ್ನಯ್ಯ ಆಚಾರ್ಯ ಜಗದೀಶನ್, ರಾಷ್ಟ್ರೀಯ ಗೌರವಾಧ್ಯಕ್ಷರು, ರಾಷ್ಟ್ರೀಯ ಜನರಲ್ ವಿಂಗ್ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಧ್ಯಕ್ಷೆ ಸುನಿತಾ, ಕರ್ನಾಟಕ ಕಾರ್ಯ್ಯದರ್ಶಿ ಮಹೇಶ್ವರಿ, ತೆಲಂಗಾಣ ಅಮರ ವೀರುಡು, ಮಲಿದಶವೀರುಡು, ತೆಲಂಗಾಣ ರಾಜ್ಯಕ್ಕಾಗಿ ಹೋರಾಡಿದ್ದ ಕಾಸೋಜ ಶ್ರೀ ಕಾಂತ್ ಆಚಾರ್ಯ ಅವರ ತಾಯಿ, ತೆಲಂಗಾಣ ಮಹಿಳಾ ಅಧ್ಯಕ್ಷೆ ಶಂಕ್ರಮ್ಮ, ಸೇರಿದಂತೆ ವಿಶ್ವ ಬ್ರಾಹ್ಮಣ ಸಮಾಜದ ಗುರು ಹಿರಿಯರು, ಧುರೀಣರು ಮತ್ತು ಎಲ್ಲ ಹಿತೈಷಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಎಲ್ಲರ ಮಾರ್ಗದರ್ಶನದಲ್ಲಿ ಸಮುದಾಯದ ಸಂಘಟನೆಗೆ ಶ್ರಮಿಸುವುದಾಗಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 