ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿದ ಬಿ.ಸಿ.ಪಾಟೀಲ್
ಹಾವೇರಿ, ಮೇ 12,ಮುಂಗಾರು ಹಂಗಾಮಿಗೆ ರೈತರ ಕೃಷಿ ಚಟುವಟಿಕೆಗಳಿಎ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಸಿದ್ಧವಾಗಿದೆ. ಅಲ್ಲದೇ ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ಪೂರೈಸಲು ಇಲಾಖೆ ತಯಾರಿ ನಡೆಸಿದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದು, ಮೆಕ್ಕೆಜೋಳವನ್ನು ಸಾಮಾನ್ಯ ವರ್ಗದವರಿಗೆ ರೂ. 20, ಪರಿಶಿಷ್ಟ ಜಾತಿ/ವರ್ಗದ ರೈತರಿಗೆ ರೂ. 30 ರಿಯಾಯಿತಿ ದರದಲ್ಲಿ ಇಲಾಖೆ ನೀಡುತ್ತಿದೆ.ಇಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮತಕ್ಷೇತ್ರ ಹಿರೇಕೆರೂರಿನಲ್ಲಿ ರಿಯಾಯಿತಿದರದಲ್ಲಿ ನೀಡಲಾಗುವ ಬಿತ್ತನೆ ಬೀಜಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಇಂದು ಸಾಂಕೇತಿಕವಾಗಿ ಒಂದಿಷ್ಟು ರೈತರಿಗೆ ಮುಸುಕಿನ ಜೋಳ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಯಿತು.
ಬಳಿಕ ಮಾತನಾಡಿದ ಸಚಿವರು, ಕಳಪೆ ಬಿತ್ತನೆ ಬೀಜ ಮಾರಾಟ ಜಾಲವನ್ನು ಭೇದಿಸಲಾಗಿದ್ದು, ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೈತರ ಬಿತ್ತನೆಗೆ ಅಗತ್ಯವಾದ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ರೈತ ಉಳಿದರೆ ದೇಶ ಉಳಿಯಲಿದೆ ಎಂದು ಸಚಿವರು ಕರೆ ನೀಡಿದರು.ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾತನಾಡಿ, ಹಿರೇಕೆರೂರು ತಾಲೂಕಿನಲ್ಲಿ ಮುಸುಕಿನಜೋಳ ಪ್ರಮುಖ ಬೆಳೆಯಾಗಿದೆ. ಸಚಿವರ ನಿರ್ದೇಶನದಂತೆ ಕಳಪೆ ನಕಲಿ ಬಿತ್ತನೆಬೀಜ ಮಾರಾಟಗಾರರನ್ನು ನಾಶ ಮಾಡುವಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದ್ದು, ಹಿಂದಿನಂತೆಯೇ ನಕಲಿತನವನ್ನು ಭೇದಿಸುವ ಕೆಲಸ ಮುಂದುವರೆದಿದೆ. ಶೇ.82 ರಷ್ಟು ಸಾಗುವಳಿ ಕ್ಷೇತ್ರದಲ್ಲಿ ಮುಸುಕಿನ ಜೋಳ ಬಿತ್ತನೆಯಾಗಲಿದ್ದು, 55648 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಇದರಲ್ಲಿ 45,660 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಗುರಿಯಿದೆ. ಭತ್ತ 1,768 ಹೆಕ್ಟೇರ್ ಹತ್ತಿ 7, 095 ಹೆಕ್ಟೇರ್ ಬಿತ್ತನೆ ಗುರಿಯಿದೆ ಎಂದರು.ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಹಾಜರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 