ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಬಿ.ಸಿ.ಪಾಟೀಲ್ ಭೇಟಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ಕೃಷಿ ಸಚಿವ
ಕೊಪ್ಪಳ, ಏ. 9, ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಹಣವಾಳ, ಸಿಂಗನಾಳ, ಸಿಂಗನಾಳ ಕ್ಯಾಂಪ್, ಜಿರಾಳ ಕಲ್ಲಗುಡಿ ರೈತರ ಹೊಲಗೀಗೆ ಭೇಟಿ ನೀಡಿ ಬೆಳೆಯನ್ನು ಪರಿಶೀಲಿಸಿದ ಸಚಿವರು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿ, ಆದಷ್ಟು ಬೇಗ ಬೆಳೆ ನಷ್ಟ ಸಮೀಕ್ಷೆ ಮಾಡಬೇಕು. ಬೆಳೆ ನಷ್ಟದಿಂದ ಯಾವುದೇ ರೈತರು ಆತಂಕಕ್ಕೊಳಗಾಗುವುದು ಬೇಡ. ಪ್ರಕೃತಿ ವಿಕೋಪಗಳಾದಾಗ ಧೈರ್ಯದಿಂದ ಇರಬೇಕು. ಸರ್ಕಾರ ರೈತರ ಜೊತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ದಡೆಸೂಗೂರು ಬಸವರಾಜ್, ಪರಣ್ಣ ಮುನವಳ್ಳಿ,ಜಿಪಂ ಅಧ್ಯಕ್ಷ ವಿಶ್ವನಾಥ ರೆಡ್ಡಿ ಸೇರಿದಂತೆ ಕೃಷಿ ತೋಟಗಾರಿಕಾ ಅಧಿಕಾರಿಗಳು ಜೊತೆಗಿದ್ದರು. ಇದಕ್ಕೂ ಮುನ್ನ ದಾರಿ ಮಧ್ಯದಲ್ಲಿ ಕೆಲವು ರೈತರನ್ನು ಭೇಟಿಯಾದರು. ಕೊಪ್ಪಳ ಜಿಲ್ಲೆಯ ಮೆಟ್ರಿ ಗ್ರಾಮದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿ, ಯಾವುದೇ ಆತಂಕವಿಲ್ಲದೇ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ ಎಂದು ಸೂಚಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 