ಎಪಿಎಂಸಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ ಬಿಡಿಸಿಸಿಐ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ
BDCCI President Yashwantraj Nagireddy met APMC Secretaries
ಬಳ್ಳಾರಿ 24: ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಕೋರಿ ಎಪಿಎಂಸಿ ನಿರ್ದೇಶಕರಾದ ಶಿವಾನಂದ ಕಪಾಸಿ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿ ಮಾಡಿದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರ ನೇತೃತ್ವದಲ್ಲಿ ನಿಯೋಗ ಮನವಿ ಮಾಡಿದೆ.
ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು, ಬಳ್ಳಾರಿಗೆ ಭೇಟಿ ನೀಡಿದಾಗ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಣ ಮೆಣಸಿನಕಾಯಿ ಮಾರುಕಟ್ಟೆಯನ್ನು ತ್ವರಿತವಾಗಿ ಪ್ರಾರಂಭಿಸಲು ಐದು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದನ್ನು ನೆನಪಿಸಿದೆ.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಜಂಟಿ ಕಾರ್ಯದರ್ಶಿ ವಿ. ರಾಮಚಂದ್ರ ಅವರು ಮನವಿ ಸಲ್ಲಿಸಿದ್ದಾರೆ. ನಗರದಲ್ಲಿ ಎಪಿಎಂಸಿ ಮಾರುಕಟ್ಟೆಯ ಸ್ಥಳಾಂತರ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸೇವಾ ಕಾರ್ಯಗಳಿಗೆ ಸೂಕ್ತ ನಿವೇಶನ ನೀಡಲು ಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 