ಬಿಇಓ ಎಚ್ ನಾಣಕೀ ನಾಯ್ಕ ಅವರಿಗೆ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ
BEO H Nanaki Naik gets State Education Seva Ratna Award
ಲಕ್ಷ್ಮೇಶ್ವರ 28: ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ನಾಣಕೀ ನಾಯ್ಕ ಅವರಿಗೆ ವಿಶ್ವ ವಿಜಯ ಪತ್ರಿಕೆ ಅವರು 21ನೇ ವರ್ಷಾಚರಣೆ ಅಂಗವಾಗಿ 2025- 26-ನೇ ಸಾಲಿನ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರೆಂದು ಗುರುತಿಸಿ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದೆ.
ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿಇಓ ಎಚ್ ನಾಣಕೀ ನಾಯ್ಕ ಅವರು ನಾವು ಯಾವುದೇ ಸರ್ಕಾರಿ ಹುದ್ದೆಯಲ್ಲಿ ಇರಲಿ ಅದನ್ನು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಅದರಿಂದ ನಮಗೂ ಆತ್ಮ ತೃಪ್ತಿ ಇರುತ್ತದೆ. ನಾವು ಮಾಡುವ ಉತ್ತಮ ಕಾರ್ಯದಿಂದ ನಮ್ಮ ಘನತೆ ಗೌರವ ಸಹ ಹೆಚ್ಚುತ್ತದೆ. ಅದಕ್ಕೆ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದು ನನಗೆ ಸಂತೋಷ ತಂದಿದೆ ಎಂದರು.
ಈ ಸಮಯದಲ್ಲಿ ಶಿಕ್ಷಕರ ವೃಂದದವರು, ಮುಖಂಡರು, ಗಣ್ಯಮಾನ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 