ಎಎಪಿ ಸೇರಿದ ಬಿಜೆಪಿ ಶಾಸಕ
ನವದೆಹಲಿ, ಜ 25 ,ದೆಹಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಇಲ್ಲಿನ ಹರಿನಗರ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಬಿಜೆಪಿ ಶಾಸಕ ಹರ್ಷವರ್ಧನ್ ಸಿಂಗ್ ಬಲ್ಲಿ ಶನಿವಾರ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಉಪಸ್ಥಿತಿಯಲ್ಲಿ ಹರ್ಷವರ್ಧನ್ ಪಕ್ಷ ಸೇರ್ಪಡೆಯಾದರು. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಉಪಸ್ಥಿತರಿದ್ದರು. ಫೆ. 8ರಂದು ದೆಹಲಿ ಚುನಾವಣೆ ನಡೆಯಲಿದ್ದು, ಫೆ. 11ರಂದು ಮತ ಎಣಿಕೆ ನಡೆಯಲಿದೆ. ಇಲ್ಲಿ ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 