ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ
BJP Youth Morcha protests against Congress
ಬೆಳಗಾವಿ 21 : ದೆಹಲಿಯಲ್ಲಿ ನಡೆದ ಎಐ ಸಮ್ಮಿತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತರು ಏಕಾಎಕಿ ನುಗ್ಗಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಅಪಮಾನ ಮಾಡಿ ಅಂತರರಾಷ್ಟ್ರೀಯ ಮಟ್ಟದ ನಾಯಕರ ವೇದಿಕೆಯಲ್ಲಿ ರಾಷ್ಟ್ರದ ಗೌರವಕ್ಕೆ ಧಕ್ಕೆ ತಂದಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬೆಳಗಾವಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಪ್ರತಿಭಟನೆ ಮುಖಾಂತರ ತೆರಳಿ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದೇ ವೇಳೆ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡದಂತೆ ತಡೆ ಹಿಡಿದು ಪೋಲಿಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ಪ್ರಶಾಂತ್ ಅಮ್ಮಿನಭಾವಿ, ಪ್ರಮೋದ ನುಗ್ಗಾನಟ್ಟಿ, ಸದಾಶಿವ ಪಾಟೀಲ,ಪ್ರಸಾದ್ ದೇವರಮನಿ,ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಹಾಗೂ ಅನೇಕ ಕಾರ್ಯಕರ್ತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 