ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಧರಣಿ ಆರಂಭ
BJP begins protest demanding Minister Nagendra's resignation
ಕಾರವರ 18: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಆರಂಭವಾಯಿತು. ಮೊದಲ ದಿನ ಯಲ್ಲಾಪುರ ಬಿಜೆಪಿ ಘಟಕದಿಂದ ಧರಣಿ ನಡೆಯುತ್ತಿದ್ದ ಎಲ್ .ಟಿ.ಪಾಟೀಲ್ ಧರಣಿ ನೇತೃತ್ವ ವಹಿಸಿದ್ದರು. ಕಾರವಾರ ನಗರಸಭೆಯ ಮಾಜಿ ಸದಸ್ಯರು ಸಹ ಧರಣಿಯಲ್ಲಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಮುಖಂಡರು , ನಿರಾಪರಾಧಿಯಾಗದ ನಾಗೇಂದ್ರ ಅವರನ್ನು ಸಚಿವ ಸಂಪುಟದಲ್ಲಿ ಸೇರಿಸಿಕೊಂಡದ್ದು ತಪ್ಪು. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡದ ಹೊರತು ಧರಣಿ ನಿಲ್ಲಿಸುವುದಿಲ್ಲ. ಅ.24 ರತನಕ ಪ್ರತಿ ವಿಧಾನಸಭಾ ವಾರು ಕಾರ್ಯಕರ್ತರು ಧರಣಿ ನಡೆಸುತ್ತೇವೆ ಎಂದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಬಿಗಿ ಬಂದೊಬಸ್ತ ಏರಿ್ಡಸಿದ್ದರು. ಬಿಜೆಪಿ ಕಾರ್ಯಕರ್ತರು ಧರಣಿ ಸ್ಥಳದಲ್ಲೇ ಅಡುಗೆ ತರಿಸಿ ಊಟ ಮಾಡಿದರು. ಬಿಜೆಪಿ ಉತ್ತರ ಕನ್ನಡ ಜಿಲ್ಲೆಯ ವತಿಯಿಂದ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ನಾಳೆ ಕಾರವಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು , ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಲಿದ್ದಾರೆಂದು ಬಿಜೆಪಿ ಮಾಧ್ಯಮ ವಕ್ತಾರ ಕಿಶನ್ ಕಾಂಬಳೆ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 